ಚಿತ್ರ ಮಂಜರಿ

ಎಂಗೇಜ್‌ ಆಗೇಬಿಟ್ರು ವೈಷ್ಣವಿ ಗೌಡ : ಮದುವೆ ಆಗುತ್ತಿರುವ ಹುಡುಗ ಯಾರು ಗೊತ್ತಾ?

ಬೆಂಗಳೂರು: ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ,  ಅಗ್ನಿಸಾಕ್ಷಿ ಸನ್ನಿಧಿ ಎಂದೇ ಖ್ಯಾತಿ ಗಳಿಸಿರುವ ವೈಷ್ಣವಿ ಗೌಡ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ ಕ್ಯಾತಿ ತಂದುಕೊಟ್ಟಿತ್ತು.  ಧಾರಾವಾಹಿ ಬಳಿಕ ವೈಷ್ಣವಿ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ ಮನೆಯಲ್ಲಿ ಅದ್ಭುತ ಆಟವಾಡುವ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು. ಧಾರಾವಾಹಿ, ರಿಯಾಲಿಟಿ ಶೋ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮಿಂಚಿದ್ದಾರೆ. ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ. ವೈಷ್ಣವಿ ಗೌಡ ಅವರ ನಿಶ್ಚಿತಾರ್ಥದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂದಹಾಗೆ ವೈಷ್ಣವಿ ಗೌಡ  ವಿದ್ಯಾ ಭರಣ್ ಎನ್ನುವರ ಜೊತೆ ಹಸೆಮಣೆ ಏರುತ್ತಿದ್ದಾರೆ. ವಿದ್ಯಾ ಭರಣ್ ಮತ್ತು ವೈಷ್ಣವಿ ಇಬ್ಬರೂ ಮಾಲೆ ಹಾಕಿಕೊಂಡು ನಿಂತಿರುವ ಫೋಟೋ ಈಗ ಎಲ್ಲಾ ಕಡೆ ಹರಿದಾಡುತ್ತಿದೆ. ವೈಷ್ಣವಿ ಮತ್ತು ವಿದ್ಯಾ ಭರಣ್ ಜೋಡಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಸದ್ಯ ವೈರಲ್ ಆಗಿರುವ ವೈಷ್ಣವಿ ಎಂಗೇಜ್ಮೆಂಟ್ ಫೋಟೋದಲ್ಲಿ ಶಂಕರ್ ಬಿದಿರಿ ಕೂಡ ಇದ್ದಾರೆ.

ವೈಷ್ಣವಿ ಹಸೆಮಣೆ ಏರುತ್ತಿರುವ ಹುಡುಗ ವಿದ್ಯಾ ಭರಣ್. ಈಗಾಗಲೇ ಒಂದು ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆಗಿದ್ದ ವಿರಾಜ್ ಎನ್ನುವ ಸಿನಿಮಾದಲ್ಲಿ ವಿದ್ಯಾ ಭರಣ್ ನಟಿಸಿದ್ದರು. ಬೆಂಗಳೂರು ಮೂಲದ ಹುಡುಗ ವಿದ್ಯಾ ಭರಣ್ ಬಿಎಮ್‌ಎಸ್ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಇದೀಗ ವೈಷ್ಣವಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

andolana

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

29 mins ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

3 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

14 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

16 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

16 hours ago