ಚಿತ್ರ ಮಂಜರಿ

ವರಾಹ ರೂಪಂ ವಿವಾದ : ‘ಕಾಂತಾರ’ಗೆ ಬಿಗ್ ರಿಲೀಫ್

ಬೆಂಗಳೂರು: ‘ವರಾಹ ರೂಪಂ’ ಹಾಡಿಗೆ  ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’  ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. 

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

1 hour ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

1 hour ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

1 hour ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

1 hour ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

2 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

2 hours ago