ಬೆಂಗಳೂರು: ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.
ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…