ಚಿತ್ರ ಮಂಜರಿ

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ ವರ್ಗಾವಣೆ!

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್‌ ಬಾಸ್‌ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್‌ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್‌ ಅವರಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಿಎಸ್​ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್​ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ವರ್ತೂರು ಸಂತೋಷ್ ಬಿಗ್​ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಇದರ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.

andolanait

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

3 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

4 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

4 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

4 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

5 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

5 hours ago