ಚಿತ್ರ ಮಂಜರಿ

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ ವರ್ಗಾವಣೆ!

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್‌ ಬಾಸ್‌ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್‌ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್‌ ಅವರಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಿಎಸ್​ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್​ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ವರ್ತೂರು ಸಂತೋಷ್ ಬಿಗ್​ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಇದರ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.

andolanait

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

58 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago