ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್ ಬಾಸ್ ವಿನ್ನರ್ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್ ಅವರಿಗೆ ಪೊಲೀಸ್ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಿಎಸ್ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವರ್ತೂರು ಸಂತೋಷ್ ಬಿಗ್ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್ಬಾಸ್ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.
ಇದರ ಬೆನ್ನಲ್ಲೇ ಪೊಲೀಸ್ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…