ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್ ಬಾಸ್ ವಿನ್ನರ್ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್ ಅವರಿಗೆ ಪೊಲೀಸ್ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಿಎಸ್ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವರ್ತೂರು ಸಂತೋಷ್ ಬಿಗ್ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್ಬಾಸ್ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.
ಇದರ ಬೆನ್ನಲ್ಲೇ ಪೊಲೀಸ್ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…