ಚಿತ್ರ ಮಂಜರಿ

ವರ್ತೂರು ಸಂತೋಷ್​ಗೆ ಸನ್ಮಾನ ಮಾಡಿದ ಇನ್​ಸ್ಪೆಕ್ಟರ್​ ವರ್ಗಾವಣೆ!

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್‌ ಬಾಸ್‌ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್‌ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ ವರ್ತೂರ್‌ ಅವರಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಸನ್ಮಾನ ಮಾಡಿದ್ದು ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪಿಎಸ್​ಐ ತಿಮ್ಮರಾಯಪ್ಪ ಎಂಬುವರು ಪೊಲೀಸ್ ಸಮವಸ್ತ್ರದಲ್ಲಿಯೇ ವರ್ತೂರು ಸಂತೋಷ್ ಅವರಿಗೆ ಸನ್ಮಾನ ಮಾಡಿದ್ದರು. ತಿಮ್ಮರಾಯಪ್ಪ, ವರ್ತೂರು ಸಂತೋಷ್​ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ತಿಮ್ಮರಾಯಪ್ಪ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ವರ್ತೂರು ಸಂತೋಷ್ ಬಿಗ್​ಬಾಸ್ ಮನೆಗೆ ಹೋದಾಗ, ಹುಲಿ ಉಗುರು ಧರಿಸಿದ್ದಾರೆಂಬ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿ ಅವರನ್ನು ಬಿಗ್​ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ಯಲಾಗಿತ್ತು. ಕೆಲ ದಿನಗಳ ಕಾಲ ಜೈಲಿನಲ್ಲಿದ್ದ ವರ್ತೂರು ಸಂತೋಷ್ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿ ಹೊರಬಂದರು. ಅದಾದ ಬಳಿಕ ಮತ್ತೆ ಬಿಗ್​ಬಾಸ್​ ಮನೆಗೆ ಬಂದು ಅದ್ಭುತವಾಗಿ ಆಟವಾಡಿ ಫೈನಲಿಸ್ಟ್ ಆದರು. ಫೈನಲಿಸ್ಟ್ ಆಗಿ ಹೊರಬಂದ ಬಳಿಕ ವರ್ತೂರು ಅವರು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ.

ಇದರ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಯೊಬ್ಬರು ಅವರಿಗೆ ಸನ್ಮಾನ ಮಾಡಿ ವರ್ಗಾವಣೆಯಾಗಿರುವುದು ಅಭಿಮಾನಿಗಳಲ್ಲಿ ಬೇಸರ ತಂದಿದೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

5 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

5 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

5 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

5 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

5 hours ago