ಚಿತ್ರ ಮಂಜರಿ

ಬಹುಮುಖ ನಟ ಅನಂತನಾಗ್ ಅವರಿಗೆ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ (ಅಕ್ಟೋಬರ್ 7) ಪ್ರದಾನ ಮಾಡಿದರು. ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಮಗಳು ಅದಿತಿ ಅಳಿಯ ವಿವೇಕ್ ಹಾಗೂ ಪತ್ನಿ ಗಾಯತ್ರಿ ಜೊತೆ ಅನಂತನಾಗ್ ಕುಟುಂಬ ಸದಸ್ಯರೆಲ್ಲರೂ ಆಗಮಿಸಿದ್ದರು.

ಇನ್ನು ಡಾಕ್ಟರೇಟ್ ಪ್ರದಾನ ಮಾಡಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ, ‘ಅನಂತನಾಗ್ ಅವರು ಚಿತ್ರರಂಗಕ್ಕೆ ಬಂದ ಸುವರ್ಣ ಮಹೋತ್ಸವದ ವರ್ಷದಲ್ಲಿ ಗೌರವ ಡಾಕ್ಟರೇಟ್ ನೀಡುವ ಮೂಲಕ ಬೆಂಗಳೂರು ಉತ್ತರ ವಿವಿ ತನ್ನನ್ನು ತಾನೇ ಗೌರವಿಸಿ ಕೊಂಡಿದೆ’ ಎಂದು ಬಣ್ಣಿಸಿದರು. ‘ಅನಂತನಾಗ್ ಮತ್ತು ಶಂಕರನಾಗ್ ಸಹೋದರರು ತಾಯಿ ಭುವನೇಶ್ವರಿಯ ಹೆಮ್ಮೆಯ ಪುತ್ರರಾಗಿದ್ದಾರೆ. ರಾಜ್ಯದಲ್ಲಿ ರಾಮಕೃಷ್ಣ ಹೆಗಡೆಯವರ ಮೂಲಕ ರಾಜಕೀಯ ಬದಲಾವಣೆ ತರುವಲ್ಲಿ ಇವರಿಬ್ಬರೂ ವಹಿಸಿದ ಪಾತ್ರ ಸ್ಮರಣೀಯವಾಗಿದೆ’ ಎಂದರು.

‘ಅಧ್ಯಯನಶೀಲತೆ ಮತ್ತು ಚಿಂತನ ಶೀಲತೆಗಳನ್ಮು ರೂಢಿಸಿಕೊಂಡಿರುವ ಅನಂತನಾಗ್ ಅವರು ಸಾರ್ವಜನಿಕ ಜೀವನದಲ್ಲಿ ಕೂಡ ತಮ್ಮ ಛಾಪು ಮೂಡಿಸಿದ ಮೇರು ವ್ಯಕ್ತಿ ಆಗಿದ್ದಾರೆ. ಅನಂತನಾಗ್ ನೇರ ಮತ್ತು ನಿಷ್ಠುರ ನುಡಿಗೆ ಹೆಸರಾಗಿದ್ದಾರೆ. ನಾಗ್ ಸಹೋದರರು ಕನ್ನಡ ನಾಡಿನ ಅದ್ಬುತ ಜೋಡಿ ಆಗಿದ್ದರು. ಅನಂತ್ ಅವರು ತಮ್ಮ ವಿಶಿಷ್ಟ ವ್ಯಕ್ತಿತ್ವಕ್ಕೆ ಹೆಸರಾಗಿದ್ದಾರೆ’ ಎಂದು ಅವರು ವ್ಯಾಖ್ಯಾನಿಸಿದರು.

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ನಟ ಅನಂತನಾಗ್ ಅಶ್ವತ್ಥನಾರಾಯಣ ಅವರನ್ನು ಹೊಗಳಿದರು. ‘ಮಲ್ಲೇಶ್ವರಂ ಕ್ಷೇತ್ರದ ಅಭಿವೃದ್ಧಿಗೆ ಅಶ್ವತ್ಥನಾರಾಯಣ ಅವರು ದಣಿವರಿಯದೆ ಕೆಲಸ ಮಾಡುತ್ತಿರುವ ಅಪರೂಪದ ಜನ ಪ್ರತಿನಿಧಿ ಆಗಿದ್ದಾರೆ’ ಎಂದು ಹೇಳಿದರು. ‘ಅದರಲ್ಲೂ ತಮ್ಮ ಕ್ಷೇತ್ರದ ಹಿರಿಯ ನಾಗರಿಕರ ಹಿತಚಿಂತಕರಾಗಿದ್ದಾರೆ. ಇಂಥವರು ಎಷ್ಟು ಸಲ ಶಾಸಕರಾಗಿ ಆಯ್ಕೆಯಾದರೂ ಅದು ಖುಷಿಯ ಸಂಗತಿಯಾಗಿರುತ್ತದೆ’ ಅಶ್ವತ್ಥನಾರಾಯಣ ಅವರನ್ನು ಹಾಡಿಹೊಗಳಿದರು.

ಅಂದಹಾಗೆ ಕಳೆದ ಜುಲೈ 14ರಂದೇ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ವಿದೇಶದಲ್ಲಿ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದ ಕಾರಣ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಅನಂತ್ ನಾಗ್ ಕನ್ನಡ ಜನಪ್ರಿಯ ನಟ. ಕನ್ನಡ ಮಾತ್ರವಲ್ಲದೇ ಹಿಂದಿ, ಮರಾಠಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತ ನಾಗ್ ನಟಿಸಿದ್ದಾರೆ.

ಸಂಕಲ್ಪ ಸಿನಿಮಾ ಮೂಲಕ 1973ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನಂತ್ ನಾಗ್ ಈಗಲೂ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. ಸದ್ಯ ಪೋಷಕನಟರಾಗಿ ಬೆಳ್ಳಿ ಪರದೆ ಮೇಲೆ ಮಿಂಚುತ್ತಿದ್ದಾರೆ. ಅದ್ಭುತ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅನಂತ್ ನಾಗ್ ಕೊನೆಯದಾಗಿ ಗಾಳಿಪಟ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಅನಂತ್ ನಾಗ್ ಬಳಿ ತಿಮ್ಮಯ್ಯಾ ಮತ್ತು ತಿಮ್ಮಯ್ಯಾ, ಮೈಸೂರು ಮಸಾಲ ಸೇರಿದಂತೆ ಅನೇಕ ಸಿನಿಮಾಗಳಿವೆ.

andolana

Recent Posts

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

5 mins ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

26 mins ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

2 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

2 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

3 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

4 hours ago