ಚಿತ್ರ ಮಂಜರಿ

ಹಿರಿಯ ನಟ ಚಲಪತಿ ರಾವ್ ಹೃದಯಾಘಾತದಿಂದ ನಿಧನ

ಇತ್ತೀಚೆಗಷ್ಟೇ ತೆಲುಗು ಚಿತ್ರರಂಗದ ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದರು. ಈ ಬೆನ್ನಲ್ಲೇ ಟಾಲಿವುಡ್‌ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನರಾಗಿದ್ದಾರೆ. ಅವರ ಅನಿರೀಕ್ಷಿತ ಸಾವು ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ.

600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ 78ರ ವಯಸ್ಸಿನ ನಟ ಚಲಪತಿ ರಾವ್ ಇನ್ನಿಲ್ಲ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಭಾನುವಾರ (ಡಿ.25) ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರು ಪುತ್ರಿಯರು, ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.  ಖಳನಟ, ಪೋಷಕ ನಟ, ಹಾಸ್ಯ ಪಾತ್ರಗಳ ಮೂಲಕ ರಂಜಿಸಿದ್ದ ಮಹಾನ್ ಪ್ರತಿಭೆ ಚಲಪತಿ ರಾವ್ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಇನ್ನೂ ಅಮೆರಿಕದಲ್ಲಿರುವ ಪುತ್ರಿಯ ಆಗಮನ ನಂತರ (ಡಿ.28) ಮಧ್ಯಾಹ್ನ 3 ಗಂಟೆಯ ನಂತರ ನಟನ ಅಂತ್ಯಕ್ರಿಯೆ ನಡೆಯಲಿದೆ. ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೆ ಅಭಿಮಾನಿಗಳ ಭೇಟಿಗಾಗಿ ಬಂಜಾರಾ ಹಿಲ್ಸ್ನಲ್ಲಿರುವ ರವಿಬಾಬು ಅವರ ಮನೆಯಲ್ಲಿ ಇರಿಸಲಾಗಿದೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago