ಚಿತ್ರ ಮಂಜರಿ

ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಕಷ್ಟು ಭಿನ್ನ ಪಾತ್ರಗಳ ಮೂಲಕ ಮನಗೆದ್ದ ನಟ ಲೋಹಿತಾಶ್ವ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು ಒಂದು ತಿಂಗಳ ಕಾಲ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೋಹಿತಾಶ್ವ ಅವರು ನಿವೃತ್ತ ಉಪನ್ಯಾಸಕರೂ ರಂಗ ಕಲಾವಿದರೂ ಆಗಿದ್ದಾರೆ.
ಲೋಹಿತಾಶ್ವಅವರ ಪುತ್ರ ಶರತ್ ಲೋಹಿತಾಶ್ವ ಆಸ್ಪತ್ರೆಯಲ್ಲಿಯೇ ಇದ್ದು ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡುತ್ತಿದ್ದರು.

ಚಿಕ್ಕ ವಯಸ್ಸಿನಿಂದಲೂ ಅವರಿಗೆ ನಟನೆಯಲ್ಲಿ ಆಸಕ್ತಿ ಇತ್ತು. ವಿದ್ಯಾರ್ಥಿ ಆಗಿದ್ದಾಗಿನಿಂದಲೇ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ಅವರು ತುಂಬ ಖ್ಯಾತಿ ಗಳಿಸಿದ್ದರು.

ಪ್ರಸಿದ್ಧ ನಟರ ಜೊತೆ ತೆರೆ ಹಂಚಿಕೊಂಡಿದ್ದ ಇವರು ವಿಲನ್ ಆಗಿಯೂ ನಟಿಸಿ ಗಮನ ಸೆಳೆದಿದ್ದರು. ಅವರ ಮಗ ಶರತ್‌ ಲೋಹಿತಾಶ್ವ ಕೂಡ ನಟನಾಗಿ ಸೈ ಎನಿಸಿಕೊಂಡಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಪ್ರಶಸ್ತಿಗಳು:
* ಕರ್ನಾಟಕ ರಾಜ್ಯ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – 2013.
* ಉದಯ ಸನ್ ಫಿಸ್ಟ್ ಪ್ರಶಸ್ತಿ – ಉತ್ತಮ ಖಳನಾಯಕ – ಆ ದಿನಗಳು (2008).
* ಏರ್ ಟೆಲ್ ಕಸ್ತೂರಿ ಪ್ರಶಸ್ತಿ – ಉತ್ತಮ ಖಳನಾಯಕ – ಆ ದಿನಗಳು (2008).
* ಮೈಸೂರು ಮಿನಿರಲ್ಸ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಆ ದಿನಗಳು (2008).
* ಫಿಲ್ಮ್ ಫೇರ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಆ ದಿನಗಳು (2008).
* ಫಿಲ್ಮ್ ಫೇರ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಕಡ್ಡಿಪುಡಿ ( 2014).

andolana

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago