ಚಿತ್ರ ಮಂಜರಿ

ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಕಷ್ಟು ಭಿನ್ನ ಪಾತ್ರಗಳ ಮೂಲಕ ಮನಗೆದ್ದ ನಟ ಲೋಹಿತಾಶ್ವ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು ಒಂದು ತಿಂಗಳ ಕಾಲ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೋಹಿತಾಶ್ವ ಅವರು ನಿವೃತ್ತ ಉಪನ್ಯಾಸಕರೂ ರಂಗ ಕಲಾವಿದರೂ ಆಗಿದ್ದಾರೆ.
ಲೋಹಿತಾಶ್ವಅವರ ಪುತ್ರ ಶರತ್ ಲೋಹಿತಾಶ್ವ ಆಸ್ಪತ್ರೆಯಲ್ಲಿಯೇ ಇದ್ದು ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡುತ್ತಿದ್ದರು.

ಚಿಕ್ಕ ವಯಸ್ಸಿನಿಂದಲೂ ಅವರಿಗೆ ನಟನೆಯಲ್ಲಿ ಆಸಕ್ತಿ ಇತ್ತು. ವಿದ್ಯಾರ್ಥಿ ಆಗಿದ್ದಾಗಿನಿಂದಲೇ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ಅವರು ತುಂಬ ಖ್ಯಾತಿ ಗಳಿಸಿದ್ದರು.

ಪ್ರಸಿದ್ಧ ನಟರ ಜೊತೆ ತೆರೆ ಹಂಚಿಕೊಂಡಿದ್ದ ಇವರು ವಿಲನ್ ಆಗಿಯೂ ನಟಿಸಿ ಗಮನ ಸೆಳೆದಿದ್ದರು. ಅವರ ಮಗ ಶರತ್‌ ಲೋಹಿತಾಶ್ವ ಕೂಡ ನಟನಾಗಿ ಸೈ ಎನಿಸಿಕೊಂಡಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಪ್ರಶಸ್ತಿಗಳು:
* ಕರ್ನಾಟಕ ರಾಜ್ಯ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – 2013.
* ಉದಯ ಸನ್ ಫಿಸ್ಟ್ ಪ್ರಶಸ್ತಿ – ಉತ್ತಮ ಖಳನಾಯಕ – ಆ ದಿನಗಳು (2008).
* ಏರ್ ಟೆಲ್ ಕಸ್ತೂರಿ ಪ್ರಶಸ್ತಿ – ಉತ್ತಮ ಖಳನಾಯಕ – ಆ ದಿನಗಳು (2008).
* ಮೈಸೂರು ಮಿನಿರಲ್ಸ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಆ ದಿನಗಳು (2008).
* ಫಿಲ್ಮ್ ಫೇರ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಆ ದಿನಗಳು (2008).
* ಫಿಲ್ಮ್ ಫೇರ್ ಪ್ರಶಸ್ತಿ – ಉತ್ತಮ ಸಹಾಯ ಪಾತ್ರ – ಕಡ್ಡಿಪುಡಿ ( 2014).

andolana

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago