ನೆಲಮಂಗಲ : ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್ರಾಜ್ರವರಿಗೆ ಸನ್ಮಾನ,ಅಭಿನಂದನೆ ಸಲ್ಲಿಸಲಾಗಿದೆ. ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್ರಾಜ್ರವರು ಕಲ್ಲಿನ ಬಂಡೆಯ ಜಾಗದಲ್ಲಿ ಪ್ರಕೃತಿಯನ್ನು ಆರಾಧಿಸುವಂತೆ ತೋಟ ಮಾಡಿರುವುದು ಆ ತೋಟದಲ್ಲಿ ಪ್ರಾಣಿಪಕ್ಷಿಗಳು ಜೀವನ ಮಾಡಲು ಅನುವು ಮಾಡಿಕೊಟ್ಟಿರುವುದು ಮನುಷ್ಯ ಜನ್ಮದ ಅದ್ಬುತ ಕಾರ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾಕೃಷ್ಣಪ್ಪ ಅಭಿಪ್ರಾಯ ಪಟ್ಟರು.
ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಆಯೋಜಿಸಲಾಗಿದ್ದ ಭಾರತ ಸ್ವಾತಂತ್ರ್ಯ ಮಹೋತ್ಸವದ ಹಿನ್ನಲೆ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಜನರಿಗೆ ಹಾಗೂ ಪಶುಗಳಿಗೆ ಸ್ವಂತ ಆಸ್ಪತ್ರೆ ನಿರ್ಮಾಣ ಮಾಡಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಸಮಾಜಕ್ಕೆ ಪ್ರೇರಣೆ, ಗಾಂಧಿಯವರ ಕನಸಿನ ಭಾರತಕ್ಕೆ ಲೀಲಾವತಿಯವರ ಸೇವೆ ಮಾದರಿಯಾಗಿದೆ. ಕರುನಾಡಿನಲ್ಲಿ ಜನಮೆಚ್ಚಿದ ಆರುನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟನೆ ಮಾಡಿ ದಕ್ಷಿಣ ಭಾರತದ ಘನತೆಯ ಕಲಾವಿದೆಯಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜೀವನ ಸಾಗಿಸುವ ಮೂಲಕ ಸಮಾಜ ಸೇವೆ ಮಾಡಿ ಮಾದರಿಯಾಗಿದ್ದಾರೆ ಎಂದರು.
ಹಿರಿಯ ನಟಿ ಡಾ.ಲೀಲಾವತಿ ಮಾತನಾಡಿ, ನನಗೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಅಭಿನಂದನೆ ಸಲ್ಲಿಸುತ್ತಿರುವುದು ಸಂತೋಷವಾಗಿದೆ. ದೇಶದಲ್ಲಿ ಗಾಂಧಿ ಕನಸಿನ ಮಾದರಿ ಗ್ರಾಮಗಳು ಸೃಷ್ಟಿಯಾದರೆ ಮಾತ್ರ ಗ್ರಾಮೀಣ ಜನರ ಬದುಕು ಉತ್ತಮವಾಗಿರುತ್ತದೆ, ನಾನು ನೆಲೆಸಿರುವ ಸೋಲದೇವನಹಳ್ಳಿ ಭಾಗದ ಗ್ರಾಮೀಣ ಜನರಿಗೆ ಅನುಕೂಲವಾಗಲು ಆಸ್ಪತ್ರೆ ಮಾಡುವ ಕನಸು ನನಸಾಗಿದೆ. ಒಂದು ಪಶು ಆಸ್ಪತ್ರೆ ಮಾಡಲಾಗುತ್ತಿದ್ದು ಮಗ ವಿನೋದ್ ರಾಜ್ ಬಲವಾಗಿ ನಿಂತಿದ್ದಾರೆ. ಗಾಂಧೀಜಿಯವರು ಹೇಳಿದಂತೆ ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಕಾಣಲಿದೆ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಭಾರತ ಸ್ವಾತಂತ್ರ್ಯ ಮಹೋತ್ಸವದ ಹಿನ್ನಲೆ ಕನ್ನಡಕ್ಕೊಬ್ಬರೆ ಅಭಿನಯ ಸರಸ್ವತಿ ಡಾ.ಲೀಲಾವತಿ ಎಂಬ ಬಿರುದು ನೀಡಿ ಪ್ರಮಾಣ ಪತ್ರ ಹಾಗೂ ಚರಕವನ್ನು ನೀಡಿ ಡಾ.ಲೀಲಾವತಿಯವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ತಾಯಿಯ ಜೊತೆ ಮಗ ವಿನೋದ್ ರಾಜ್ರವರಿಗೂ ಸಹ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಟ ವಿನೋದ್ರಾಜ್, ರಾಷ್ಟೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ ಪ್ರಶಾಂತ್,ಅಧ್ಯಾಪಕಿ ಶಾಮಲಾ, ಕನ್ನಡ ಸಾಹಿತ್ಯ ಪರಿಷತ್ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗಿಯಾಗಿದ್ದರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…