ನೆಲಮಂಗಲ : ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್ರಾಜ್ರವರಿಗೆ ಸನ್ಮಾನ,ಅಭಿನಂದನೆ ಸಲ್ಲಿಸಲಾಗಿದೆ. ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್ರಾಜ್ರವರು ಕಲ್ಲಿನ ಬಂಡೆಯ ಜಾಗದಲ್ಲಿ ಪ್ರಕೃತಿಯನ್ನು ಆರಾಧಿಸುವಂತೆ ತೋಟ ಮಾಡಿರುವುದು ಆ ತೋಟದಲ್ಲಿ ಪ್ರಾಣಿಪಕ್ಷಿಗಳು ಜೀವನ ಮಾಡಲು ಅನುವು ಮಾಡಿಕೊಟ್ಟಿರುವುದು ಮನುಷ್ಯ ಜನ್ಮದ ಅದ್ಬುತ ಕಾರ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾಕೃಷ್ಣಪ್ಪ ಅಭಿಪ್ರಾಯ ಪಟ್ಟರು.
ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಆಯೋಜಿಸಲಾಗಿದ್ದ ಭಾರತ ಸ್ವಾತಂತ್ರ್ಯ ಮಹೋತ್ಸವದ ಹಿನ್ನಲೆ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಜನರಿಗೆ ಹಾಗೂ ಪಶುಗಳಿಗೆ ಸ್ವಂತ ಆಸ್ಪತ್ರೆ ನಿರ್ಮಾಣ ಮಾಡಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಸಮಾಜಕ್ಕೆ ಪ್ರೇರಣೆ, ಗಾಂಧಿಯವರ ಕನಸಿನ ಭಾರತಕ್ಕೆ ಲೀಲಾವತಿಯವರ ಸೇವೆ ಮಾದರಿಯಾಗಿದೆ. ಕರುನಾಡಿನಲ್ಲಿ ಜನಮೆಚ್ಚಿದ ಆರುನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟನೆ ಮಾಡಿ ದಕ್ಷಿಣ ಭಾರತದ ಘನತೆಯ ಕಲಾವಿದೆಯಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜೀವನ ಸಾಗಿಸುವ ಮೂಲಕ ಸಮಾಜ ಸೇವೆ ಮಾಡಿ ಮಾದರಿಯಾಗಿದ್ದಾರೆ ಎಂದರು.
ಹಿರಿಯ ನಟಿ ಡಾ.ಲೀಲಾವತಿ ಮಾತನಾಡಿ, ನನಗೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಅಭಿನಂದನೆ ಸಲ್ಲಿಸುತ್ತಿರುವುದು ಸಂತೋಷವಾಗಿದೆ. ದೇಶದಲ್ಲಿ ಗಾಂಧಿ ಕನಸಿನ ಮಾದರಿ ಗ್ರಾಮಗಳು ಸೃಷ್ಟಿಯಾದರೆ ಮಾತ್ರ ಗ್ರಾಮೀಣ ಜನರ ಬದುಕು ಉತ್ತಮವಾಗಿರುತ್ತದೆ, ನಾನು ನೆಲೆಸಿರುವ ಸೋಲದೇವನಹಳ್ಳಿ ಭಾಗದ ಗ್ರಾಮೀಣ ಜನರಿಗೆ ಅನುಕೂಲವಾಗಲು ಆಸ್ಪತ್ರೆ ಮಾಡುವ ಕನಸು ನನಸಾಗಿದೆ. ಒಂದು ಪಶು ಆಸ್ಪತ್ರೆ ಮಾಡಲಾಗುತ್ತಿದ್ದು ಮಗ ವಿನೋದ್ ರಾಜ್ ಬಲವಾಗಿ ನಿಂತಿದ್ದಾರೆ. ಗಾಂಧೀಜಿಯವರು ಹೇಳಿದಂತೆ ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಕಾಣಲಿದೆ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಭಾರತ ಸ್ವಾತಂತ್ರ್ಯ ಮಹೋತ್ಸವದ ಹಿನ್ನಲೆ ಕನ್ನಡಕ್ಕೊಬ್ಬರೆ ಅಭಿನಯ ಸರಸ್ವತಿ ಡಾ.ಲೀಲಾವತಿ ಎಂಬ ಬಿರುದು ನೀಡಿ ಪ್ರಮಾಣ ಪತ್ರ ಹಾಗೂ ಚರಕವನ್ನು ನೀಡಿ ಡಾ.ಲೀಲಾವತಿಯವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ತಾಯಿಯ ಜೊತೆ ಮಗ ವಿನೋದ್ ರಾಜ್ರವರಿಗೂ ಸಹ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಟ ವಿನೋದ್ರಾಜ್, ರಾಷ್ಟೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ ಪ್ರಶಾಂತ್,ಅಧ್ಯಾಪಕಿ ಶಾಮಲಾ, ಕನ್ನಡ ಸಾಹಿತ್ಯ ಪರಿಷತ್ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗಿಯಾಗಿದ್ದರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…