ಚಿತ್ರ ಮಂಜರಿ

ಮತ್ತೆ ಟ್ರೋಲ್‌ ಆದ ಆದಿಪುರುಷ ಚಿತ್ರದ VFX ಅಪ್‌ಡೇಟ್‌

ಪ್ರಭಾಸ್‌ ಅಭಿನಯದ ‘ಆದಿಪುರುಷ‘ ಚಿತ್ರ ನ್ಯೂಯಾರ್ಕ್‌ನ ಟ್ರಿಬೆಕಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ತಯಾರಾಗಿದ್ದು, ಚಿತ್ರದ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದು ಕಂಡುಬಂದಿದೆ. ಚಿತ್ರದ ವಿಎಫ್‌ಎಕ್ಸ್‌ ಅಪ್‌ಡೇಟ್‌ ನೋಡಿದ ನೆಟ್ಟಿಗರೊಬ್ಬರು ‘ಬ್ರೈಟ್‌ನೆಸ್‌ ಕಮ್ಮಿ ಮಾಡಿ, ಕಲರ್‌ ಟೋನ್‌ ಜಾಸ್ತಿ ಮಾಡಿದಾಕ್ಷಣ ವಿಎಫ್‌ಎಕ್ಸ್‌ ಅಥವಾ ಸಿಜಿಐ ಸುಧಾರಿಸುವುದಿಲ್ಲವಲ್ಲವೇ?‘ ಎಂದು ಟ್ರೋಲ್‌ ಮಾಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆದಿಪುರುಷ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದು, ಚಿತ್ರದ ವಿಎಫ್‌ಎಕ್ಸ್‌ ನೋಡಿ ಹಲವರು ಗೇಲಿ ಮಾಡಿದ್ದರು. ಇದೊಂದು ಕೆಟ್ಟ ವಿಎಫ್‌ಎಕ್ಸ್ ಆಗಿದೆ ಎಂದು ಹೇಳಿದ್ದರು. ಇದೀಗ ಚಿತ್ರತಂಡ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ತಂದಿದ್ದು, ಈಗ ಮತ್ತೆ ಟ್ರೋಲ್‌ಗೆ ಒಳಗಾಗಿದೆ. ‘ಆದಿಪುರುಷ ಚಿತ್ರತಂಡ ನೀಲಿಯಾಗಿ ಕಾಣುತ್ತಿದ್ದ ಬ್ಯಾಕ್‌ಗ್ರೌಂಡ್‌ ಬಣ್ಣವನ್ನು ಹಳದಿಯಾಗಿ ಬದಲಾಯಿಸಿದೆ‘ ಎಂದು ಮತ್ತೊಬ್ಬ ಟ್ವಿಟಿಗರು ವಿಎಫ್ಎಕ್ಸ್‌ ಬದಲಾವಣೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ .

‘ಆದಿಪುರುಷ ಚಿತ್ರತಂಡವು ಹೊಸ ಮತ್ತು ಸುಧಾರಿತ ವಿಎಫ್‌ಎಕ್ಸ್ ಅನ್ನು ಪ್ರಚಾರ ಮಾಡುತ್ತಿರುವ ರೀತಿ ಹಾಸ್ಯಾಸ್ಪವಾಗಿದೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದರ ಬಗ್ಗೆ ಅವರಿಗೆ ತಿಳಿಯುತ್ತಿಲ್ಲವೇ? ಕಲರ್‌ ಗ್ರೇಡಿಂಗ್ ಮತ್ತು ವಿಎಫ್‌ಎಕ್ಸ್‌ ನಡುವೆ ವ್ಯತ್ಯಾಸವಿದೆ‘ ಎಂದು ನೆಟ್ಟಿಗರೊಬ್ಬರು ಕಿಡಿಕಾರಿದ್ದಾರೆ.

ಪೌರಾಣಿಕ ಕಥೆಯಾಧಾರಿತ ಆದಿಪುರುಷ ಚಿತ್ರದಲ್ಲಿ ಪ್ರಭಾಸ್ ಮತ್ತು ಬಾಲಿವುಡ್‌ ನಟಿ ಕೃತಿ ಸನೂನ್‌ ನಟಿಸಿದ್ದಾರೆ. ಚಿತ್ರದಲ್ಲಿ ಸೈಫ್‌ ಅಲಿ ಖಾನ್‌ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಜೂನ್‌ 16ಕ್ಕೆ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ.

 

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago