ಚಿತ್ರ ಮಂಜರಿ

ಮತ್ತೆ ಟ್ರೋಲ್‌ ಆದ ಆದಿಪುರುಷ ಚಿತ್ರದ VFX ಅಪ್‌ಡೇಟ್‌

ಪ್ರಭಾಸ್‌ ಅಭಿನಯದ ‘ಆದಿಪುರುಷ‘ ಚಿತ್ರ ನ್ಯೂಯಾರ್ಕ್‌ನ ಟ್ರಿಬೆಕಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ತಯಾರಾಗಿದ್ದು, ಚಿತ್ರದ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದು ಕಂಡುಬಂದಿದೆ. ಚಿತ್ರದ ವಿಎಫ್‌ಎಕ್ಸ್‌ ಅಪ್‌ಡೇಟ್‌ ನೋಡಿದ ನೆಟ್ಟಿಗರೊಬ್ಬರು ‘ಬ್ರೈಟ್‌ನೆಸ್‌ ಕಮ್ಮಿ ಮಾಡಿ, ಕಲರ್‌ ಟೋನ್‌ ಜಾಸ್ತಿ ಮಾಡಿದಾಕ್ಷಣ ವಿಎಫ್‌ಎಕ್ಸ್‌ ಅಥವಾ ಸಿಜಿಐ ಸುಧಾರಿಸುವುದಿಲ್ಲವಲ್ಲವೇ?‘ ಎಂದು ಟ್ರೋಲ್‌ ಮಾಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆದಿಪುರುಷ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದು, ಚಿತ್ರದ ವಿಎಫ್‌ಎಕ್ಸ್‌ ನೋಡಿ ಹಲವರು ಗೇಲಿ ಮಾಡಿದ್ದರು. ಇದೊಂದು ಕೆಟ್ಟ ವಿಎಫ್‌ಎಕ್ಸ್ ಆಗಿದೆ ಎಂದು ಹೇಳಿದ್ದರು. ಇದೀಗ ಚಿತ್ರತಂಡ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ತಂದಿದ್ದು, ಈಗ ಮತ್ತೆ ಟ್ರೋಲ್‌ಗೆ ಒಳಗಾಗಿದೆ. ‘ಆದಿಪುರುಷ ಚಿತ್ರತಂಡ ನೀಲಿಯಾಗಿ ಕಾಣುತ್ತಿದ್ದ ಬ್ಯಾಕ್‌ಗ್ರೌಂಡ್‌ ಬಣ್ಣವನ್ನು ಹಳದಿಯಾಗಿ ಬದಲಾಯಿಸಿದೆ‘ ಎಂದು ಮತ್ತೊಬ್ಬ ಟ್ವಿಟಿಗರು ವಿಎಫ್ಎಕ್ಸ್‌ ಬದಲಾವಣೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ .

‘ಆದಿಪುರುಷ ಚಿತ್ರತಂಡವು ಹೊಸ ಮತ್ತು ಸುಧಾರಿತ ವಿಎಫ್‌ಎಕ್ಸ್ ಅನ್ನು ಪ್ರಚಾರ ಮಾಡುತ್ತಿರುವ ರೀತಿ ಹಾಸ್ಯಾಸ್ಪವಾಗಿದೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದರ ಬಗ್ಗೆ ಅವರಿಗೆ ತಿಳಿಯುತ್ತಿಲ್ಲವೇ? ಕಲರ್‌ ಗ್ರೇಡಿಂಗ್ ಮತ್ತು ವಿಎಫ್‌ಎಕ್ಸ್‌ ನಡುವೆ ವ್ಯತ್ಯಾಸವಿದೆ‘ ಎಂದು ನೆಟ್ಟಿಗರೊಬ್ಬರು ಕಿಡಿಕಾರಿದ್ದಾರೆ.

ಪೌರಾಣಿಕ ಕಥೆಯಾಧಾರಿತ ಆದಿಪುರುಷ ಚಿತ್ರದಲ್ಲಿ ಪ್ರಭಾಸ್ ಮತ್ತು ಬಾಲಿವುಡ್‌ ನಟಿ ಕೃತಿ ಸನೂನ್‌ ನಟಿಸಿದ್ದಾರೆ. ಚಿತ್ರದಲ್ಲಿ ಸೈಫ್‌ ಅಲಿ ಖಾನ್‌ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಜೂನ್‌ 16ಕ್ಕೆ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ.

 

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago