ಚಿತ್ರ ಮಂಜರಿ

ವಿದ್ಯಾಕೇಂದ್ರ ಪಾತ್ರದ ‘ಬೇಬೋ’ ಆದ್ರೆ ಇವರು ಕರೀನಾ ಅಲ್ಲ

ಈ ಹಿಂದೆ ‘ಯುದ್ಧ ಮತ್ತು ಸ್ಥಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ‘ಬೇಬೋ’ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಜಯ ಹರಿಪ್ರಸಾದ್ ನಿರ್ದೇಶಿಸುತ್ತಿದ್ದಾರೆ. ವಿ.ಕೆ.ಕಂಬೈನ್ಸ್ ಲಾಂಛನದಲ್ಲಿ ವಿದ್ಯಾ ಅವರ ಬಂಧುಗಳಾದ ಸಂತೋಷ್ ವಿಜಯ್ ಮತ್ತು ಸುಪ್ರೀಶ್ ವಿಜಯ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇಷ್ಟಕ್ಕೂ ‘ಬೇಬೋ’ ಎಂದರೇನು ಎಂಬ ಪ್ರಶ್ನೆಯನ್ನು‌ ವಿದ್ಯಾ ಮುಂದಿಟ್ಟರೆ, ‘ಬಾಲಿವುಡ್ ನಟಿ ಕರೀನಾ ಕಪೂರ್ ಅವರಿಗೆ ಬೇಬೋ ಎಂಬ ಅಡ್ಡ ಹೆಸರಿದೆ. ಇಲ್ಲಿ ನಾಯಕಿಯ ಹೆಸರು ಮಹಾಲಕ್ಷ್ಮೀ, ಆಕೆಗೆ ಕರಿನಾ ಕಪೂರ್‌ ಎಂದರೆ ಬಹಳ ಇದ್ದ. ಅವರಂತ ಜೀವನದಲ್ಲಿ ಆಗಬೇಕು ಎಂದು ಕನಸು ಕಾಣುತ್ತಿರುತ್ತಾಳೆ. ಹಾಗಾಗಿ, ಆಕೆಯ ಗೆಳತಿಯರು ಆಕೆಯನ್ನು ಬೇಬೋ ಎಂದು ಕರೆಯುತ್ತಿರುತ್ತಾರೆ. ಅದೇ ಕಾರಣಕ್ಕೆ ಚಿತ್ರಕ್ಕೆ ಈ ಹೆಸರಿಟ್ಟಿದ್ದೇವೆ’ ಎಂದರು.

ಈ ಚಿತ್ರದ ಕುರಿತು ಮಾತನಾಡುವ ನಾಯಕಿ ವಿದ್ಯಾ, “ಸಾಮಾನ್ಯವಾಗಿ ಮನುಷ್ಯ ದಪ್ಪಗಿದ್ದರೆ, ಆತನನ್ನು ಸಮಾಜ ದೂರ ಇಟ್ಟು ಬಿಡುತ್ತದೆ. ಅವರಿಂದ ಏನೂ ಕೆಲಸವಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬಂದು ಬಿಡುತ್ತಾರೆ. ಈ ಚಿತ್ರದಲ್ಲಿ ನಾನು ಕ್ಲಾಸಿಕಲ್ ಡ್ಯಾನ್ಸ‌ರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ, ಮನಸ್ಸು ಮಾಡಿದರೆ ಹೆಚ್ಚು ತೂಕವಿರುವವರು ಜೀವನದಲ್ಲಿ ದೊಡ್ಡ ಸಾಧನೆ ಮಾಡಬಹುದು ಎಂದು ಹೇಳುವ ಚಿತ್ರವಿದು’ ಎಂದರು.

ನಿರ್ದೇಶಕ ಜಯ ಹರಿಪ್ರಸಾದ್, “ಇದೊಂದು ನೃತ್ಯದ ಕುರಿತಾದ ಚಿಕ್ಕ, ದಪ್ಪ ಇರುವ ವ್ಯಕ್ತಿಯೊಬ್ಬರು ನೃತ್ಯದಲ್ಲಿ ದೊಡ್ಡ ಸಾಧನೆ ಮಾಡುವ ಕಥೆ ಇರುವ ಚಿತ್ರ. ನಾವು ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಈ ಚಿತ್ರದ ಮೂಲಕ ಹೇಳುದ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

‘ಬೇಬೋ’ ಚಿತ್ರದಲ್ಲಿ ವಿದ್ಯಾ ತಾಯಿಯಾಗಿ ರೇಖಾ ದಾಸ್‌ ಅಭಿನಯಿಸಿದರೆ, ರಾಧಾ ರಾಮಚಂದ್ರ ಆಧುನಿಕ ಅಜ್ಜಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅನಿಲ್ ಮತ್ತು ಸೂರ್ಯವರ್ಧನ್ ಎಂಬ ಇಬ್ಬರು ಹೊಸನಾಯಕರನ್ನು ಚಿತ್ರದ ಮೂಲಕ ಪರಿಚಯಿಸಲಾಗುತ್ತಿದೆ. ‘ಬೇಬೋ’ ಚಿತ್ರಕ್ಕೆ ‘ಆದ್ರೆ ಇವ್ಳು ಕರೀನಾ ಅಲ್ಲ’ ಎಂಬ ಅಡಿ ಬರಹವಿದ್ದು, ಚಿತ್ರಕ್ಕೆ ವಿ.ಮನೋಹರ್ ಸಂಗೀತ ಸಂಯೋಜನೆ ಮತ್ತು ಮೋಹನ್ ಕುಮಾರ್ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago