ಚಿತ್ರ ಮಂಜರಿ

ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ ಶಾಂತಿಯ ಭಾರತಕ್ಕೆ ಮತ್ತೆ ಮರಳಬೇಕಿದೆ: ನಟ ಕಿಶೋರ್

ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, ʼʼವಿಶ್ವಗುರುಗಳಿದ್ದಾರೆ ಎಚ್ಚರ .. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆʼʼ ಎಂದು ಕರೆ ಕೊಟ್ಟಿದ್ದಾರೆ.

https://www.instagram.com/p/CvgZahOP1N2/

ʼʼಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ..ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರʼʼ ಎಂದು ಕಿಡಿಕಾರಿದ್ದಾರೆ.

ಮುಂದುವರಿದು ʼʼಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ..ʼʼ ಎಂದು ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

7 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago