ಚಿತ್ರ ಮಂಜರಿ

ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ ಶಾಂತಿಯ ಭಾರತಕ್ಕೆ ಮತ್ತೆ ಮರಳಬೇಕಿದೆ: ನಟ ಕಿಶೋರ್

ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, ʼʼವಿಶ್ವಗುರುಗಳಿದ್ದಾರೆ ಎಚ್ಚರ .. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆʼʼ ಎಂದು ಕರೆ ಕೊಟ್ಟಿದ್ದಾರೆ.

https://www.instagram.com/p/CvgZahOP1N2/

ʼʼಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ..ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರʼʼ ಎಂದು ಕಿಡಿಕಾರಿದ್ದಾರೆ.

ಮುಂದುವರಿದು ʼʼಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ..ʼʼ ಎಂದು ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.

andolanait

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

1 hour ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

1 hour ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

3 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago