ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ʼʼವಿಶ್ವಗುರುಗಳಿದ್ದಾರೆ ಎಚ್ಚರ .. ಈ ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆʼʼ ಎಂದು ಕರೆ ಕೊಟ್ಟಿದ್ದಾರೆ.
https://www.instagram.com/p/CvgZahOP1N2/
ʼʼಮಣಿಪುರದಲ್ಲಿ, ಹರಿಯಾಣದಲ್ಲಿ, ಮುಂಬೈ ರೈಲಿನಲ್ಲಿ , ಟಿವಿ ಚಾನೆಲ್ಲುಗಳಲ್ಲಿ , ಪಾರ್ಲಿಮೆಂಟಿನಲ್ಲಿ , ಕಪಟ ಕ್ಯಾಪಿಟಲಿಸ್ಟುಗಳ ಡ್ರಾಯಿಂಗು ರೂಮಿನಲ್ಲಿ , ಕೋರ್ಟು ಕಚೇರಿಗಳಲ್ಲಿ , ಪೋಲೀಸು ವೇಷದಲ್ಲಿ , ಐಟಿ ಸೆಲ್ಲುಗಳಲ್ಲಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದ ಮೂಲೆ ಮೂಲೆಯಲ್ಲಿ..ದೇವರ ಹೆಸರಲ್ಲಿ, ಅಧಿಕಾರ ದಾಹದ ಹೊಲಸಲ್ಲಿ , ಮತಿಭ್ರಮಿತರಾದ ಮತಾಂಧ ವಿಶ್ವಗುರುಗಳಿದ್ದಾರೆ.. ಎಚ್ಚರʼʼ ಎಂದು ಕಿಡಿಕಾರಿದ್ದಾರೆ.
ಮುಂದುವರಿದು ʼʼಇವರಿಗೆ ಜೈ ಅನ್ನದಿದ್ದರೆ, ಇವರನ್ನು ಪ್ರಶ್ನಿಸಿದರೆ … ಯೋಚಿಸಿದರೂ ಸಹ … ಗುಂಡಿಕ್ಕುತ್ತಾರೆ, ಬಡಿದು ಕೊಲ್ಲುತ್ತಾರೆ, ಮನೆ ಮಠ ಸುಡುತ್ತಾರೆ, ಕೆಡವುತ್ತಾರೆ, ಮಕ್ಕಳನ್ನು ಕಡಿದು ಕೊಲ್ಲುತ್ತಾರೆ. ಬೆತ್ತಲೆ ಮೆರವಣಿಗೆ ಮಾಡಿಸಿ ಅತ್ಯಾಚಾರ ಮಾಡುತ್ತಾರೆ, ದೇಶದ ಕೀರ್ತಿ ವಿಶ್ವದಲ್ಲೆಲ್ಲ ಹರಡುತ್ತಾರೆ..ʼʼ ಎಂದು ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…