ಚಿತ್ರ ಮಂಜರಿ

ʼಜೊತೆ ಜೊತೆಯಲಿʼ ತಂಡದಲ್ಲಿ ಹೆಚ್ಚಿದ ಮನಸ್ಥಾಪ: ಧಾರಾವಾಹಿಯ ಕಥೆಯಲ್ಲಿ ಯಾವೆಲ್ಲ ಬದಲಾವಣೆಗಳು ಸಾಧ್ಯ?

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ  ತಂಡದಿಂದ ನಾಯಕ ನಟ ಅನಿರುದ್ಧ್  ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್​ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.

andolana

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

12 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

29 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

42 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago