ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ ತಂಡದಿಂದ ನಾಯಕ ನಟ ಅನಿರುದ್ಧ್ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.
ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.
ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…