ಚಿತ್ರ ಮಂಜರಿ

ʼಜೊತೆ ಜೊತೆಯಲಿʼ ತಂಡದಲ್ಲಿ ಹೆಚ್ಚಿದ ಮನಸ್ಥಾಪ: ಧಾರಾವಾಹಿಯ ಕಥೆಯಲ್ಲಿ ಯಾವೆಲ್ಲ ಬದಲಾವಣೆಗಳು ಸಾಧ್ಯ?

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ  ತಂಡದಿಂದ ನಾಯಕ ನಟ ಅನಿರುದ್ಧ್  ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್​ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.

andolana

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

29 mins ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

31 mins ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

33 mins ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

36 mins ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

44 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

49 mins ago