ಚಿತ್ರ ಮಂಜರಿ

ʼಜೊತೆ ಜೊತೆಯಲಿʼ ತಂಡದಲ್ಲಿ ಹೆಚ್ಚಿದ ಮನಸ್ಥಾಪ: ಧಾರಾವಾಹಿಯ ಕಥೆಯಲ್ಲಿ ಯಾವೆಲ್ಲ ಬದಲಾವಣೆಗಳು ಸಾಧ್ಯ?

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ  ತಂಡದಿಂದ ನಾಯಕ ನಟ ಅನಿರುದ್ಧ್  ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್​ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago