ಚಿತ್ರ ಮಂಜರಿ

ʼಜೊತೆ ಜೊತೆಯಲಿʼ ತಂಡದಲ್ಲಿ ಹೆಚ್ಚಿದ ಮನಸ್ಥಾಪ: ಧಾರಾವಾಹಿಯ ಕಥೆಯಲ್ಲಿ ಯಾವೆಲ್ಲ ಬದಲಾವಣೆಗಳು ಸಾಧ್ಯ?

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ  ತಂಡದಿಂದ ನಾಯಕ ನಟ ಅನಿರುದ್ಧ್  ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ ಪ್ಲ್ಯಾನ್​ಗಳೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಏಕೆಂದರೆ ಅವರೇ ಹೇಳಿದಂತೆ ಜೊತೆ ಜೊತೆಯಲಿ ಕಥೆಯು ಶೇ.95 ರಷ್ಟು ಆರ್ಯವರ್ಧನ್ ಪಾತ್ರದ ಸುತ್ತ ನಡೆಯುತ್ತದೆ. ಇದೀಗ ಅದೇ ಪಾತ್ರಧಾರಿ ಹೊರನಡೆದಿರುವ ಕಾರಣ ಧಾರಾವಾಹಿಗೆ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ಇದಾಗ್ಯೂ ಜೊತೆ ಜೊತೆಯಲಿ ತಂಡದ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಚರ್ಚೆಗಳನ್ನೂ ಕೂಡ ನಡೆಸಿದೆ. ಅದರಲ್ಲೂ ಕಥೆಯಲ್ಲಿನ ಬದಲಾವಣೆಯ ಬಗ್ಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾತನಾಡಿರುವ ಆರೂರು ಜಗದೀಶ್, ಜೊತೆ ಜೊತೆಯಲಿ ಧಾರಾವಾಹಿಯ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್ ಇರಬಹುದು ಅಥವಾ ಇಲ್ಲದಿರಬಹುದು. ಇದಕ್ಕಾಗಿ ನಾವು ಕೂಡ ಪ್ಲ್ಯಾನ್ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಕಥೆಯಲ್ಲಿ ಟ್ವಿಸ್ಟ್ ಕೊಡುವ ಮೂಲಕ ಆರ್ಯವರ್ಧನ್ ಇಲ್ಲದೆಯೇ ಜೊತೆ ಜೊತೆಯಲಿ ಧಾರಾವಾಹಿಯನ್ನು ಮುಂದುವರೆಸುವ ಸೂಚನೆಯನ್ನೂ ಕೂಡ ನೀಡಿದ್ದಾರೆ. ಹೀಗಾಗಿ ಮುಂದಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಪಾತ್ರ ಇರುವುದು ಅನುಮಾನ ಎನ್ನಬಹುದು. ಅಲ್ಲದೆ ಆರ್ಯವರ್ಧವನ್ ಪಾತ್ರವನ್ನು ಹೊರಗಿಟ್ಟು, ಅಂದರೆ ವಿದೇಶಕ್ಕೆ ತೆರಳಿದ್ದಾರೆ ಎಂಬುದನ್ನು ಸೂಚಿಸಿ ಧಾರಾವಾಹಿಯನ್ನು ಮುಂದುವರೆಸುವ ಸಾಧ್ಯತೆಯಿದೆ.

ಏಕೆಂದರೆ ನಟ ಅನಿರುದ್ಧ್ ಹೇಳಿದಂತೆ, ಈ ಧಾರಾವಾಹಿಯು 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೀಗಾಗಿ ಜೊತೆ ಜೊತೆಯಲಿ ತಂಡ ಮತ್ತೊಂದು ಸಿರೀಯಲ್ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆಯಿದೆ. ಅಂದರೆ ಹಳೆಯ ಪಾತ್ರಗಳೇ ಇಲ್ಲೂ ಕೂಡ ಮುಂದುವರೆಯಬಹುದು. ಆದರೆ ಈ ವೇಳೆ ಹೊಸ ನಾಯಕ ನಟ ಎಂಟ್ರಿ ಕೊಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕಿರುತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಜೊತೆ ಜೊತೆಯಲಿ ತಂಡದ ಬಿರುಕಿಗೆ ಇದೀಗ ತಾರ್ಕಿಕ ಅಂತ್ಯ ಸಿಕ್ಕಿದೆ. ಇದರ ಬೆನ್ನಲ್ಲೇ ಆರೂರು ಜಗದೀಶ್ ಅವರ ಮುಂದಿನ ನಡೆಯೇನು ಎಂಬುದೇ ಪ್ರೇಕ್ಷಕರ ಕುತೂಹಲ. ಅದರಲ್ಲೂ ಆರ್ಯವರ್ಧನ್ ಪಾತ್ರ ಇರಲಿದೆಯಾ ಎಂಬುದನ್ನು ವೀಕ್ಷಿಸಲು ಜೊತೆ ಜೊತೆಯಲಿ ಅಭಿಮಾನಿಗಳು ಕಾದು ಕುಳಿತಿರುವುದಂತು ಸತ್ಯ. ಹೀಗಾಗಿ ಮತ್ತೊಮ್ಮೆ ಟಿಆರ್​ಪಿಯಲ್ಲಿ ಜೊತೆ ಜೊತೆಯಲಿ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಿದೆ.

andolana

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

35 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago