ಚಿತ್ರ ಮಂಜರಿ

ಈ ಪಟ್ಟಣಕ್ಕೆ ಏನಾಗಿದೆ ? : ಚಿತ್ರರಂಗದಲ್ಲೂ ಗ್ಯಾರಂಟಿ ಭಾಗ್ಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯಗಳು ಘೋಷಣೆ, ಜನಪ್ರಿಯವಾಗುತ್ತಿದ್ದಂತೆಯೇ ಈಗ ಜನರು ಗ್ಯಾರಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರಂಟಿಗಳನ್ನು ನೀಡಲಿದೆ ‘ಈ ಪಟ್ಟಣಕ್ಕೆ ಏನಾಗಿದೆ ?’ ಚಿತ್ರತಂಡ.

ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ ಈ ಪಟ್ಟಣಕ್ಕೆ ಏನಾಗಿದೆ?. ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.

ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ.

ಪ್ಯಾನ್ ಇಂಡಿಯಾ ಚಿತ್ರವಾಗುವ ಎಲ್ಲ ಸಾಧ್ಯತೆಗಳನ್ನೊಳಗೊಂಡ ಯೂನಿವರ್ಸಲ್ ಅಂಶಗಳಿರುವ ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ , ಸೋನಾ , ದಿಶಾ , ಸಂಧ್ಯಾ ವೇಣು , ಶ್ರೀ ಕ್ರೇಜಿಮೈಂಡ್, ಬಲರಾಮ್, ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

1 hour ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

1 hour ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago