ಚಿತ್ರ ಮಂಜರಿ

ಈ ಪಟ್ಟಣಕ್ಕೆ ಏನಾಗಿದೆ ? : ಚಿತ್ರರಂಗದಲ್ಲೂ ಗ್ಯಾರಂಟಿ ಭಾಗ್ಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯಗಳು ಘೋಷಣೆ, ಜನಪ್ರಿಯವಾಗುತ್ತಿದ್ದಂತೆಯೇ ಈಗ ಜನರು ಗ್ಯಾರಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರಂಟಿಗಳನ್ನು ನೀಡಲಿದೆ ‘ಈ ಪಟ್ಟಣಕ್ಕೆ ಏನಾಗಿದೆ ?’ ಚಿತ್ರತಂಡ.

ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ ಈ ಪಟ್ಟಣಕ್ಕೆ ಏನಾಗಿದೆ?. ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.

ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ.

ಪ್ಯಾನ್ ಇಂಡಿಯಾ ಚಿತ್ರವಾಗುವ ಎಲ್ಲ ಸಾಧ್ಯತೆಗಳನ್ನೊಳಗೊಂಡ ಯೂನಿವರ್ಸಲ್ ಅಂಶಗಳಿರುವ ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ , ಸೋನಾ , ದಿಶಾ , ಸಂಧ್ಯಾ ವೇಣು , ಶ್ರೀ ಕ್ರೇಜಿಮೈಂಡ್, ಬಲರಾಮ್, ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

lokesh

Recent Posts

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

7 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

19 mins ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

30 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

48 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

55 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

2 hours ago