ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯಗಳು ಘೋಷಣೆ, ಜನಪ್ರಿಯವಾಗುತ್ತಿದ್ದಂತೆಯೇ ಈಗ ಜನರು ಗ್ಯಾರಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರಂಟಿಗಳನ್ನು ನೀಡಲಿದೆ ‘ಈ ಪಟ್ಟಣಕ್ಕೆ ಏನಾಗಿದೆ ?’ ಚಿತ್ರತಂಡ.
ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ ಈ ಪಟ್ಟಣಕ್ಕೆ ಏನಾಗಿದೆ?. ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.
ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ.
ಪ್ಯಾನ್ ಇಂಡಿಯಾ ಚಿತ್ರವಾಗುವ ಎಲ್ಲ ಸಾಧ್ಯತೆಗಳನ್ನೊಳಗೊಂಡ ಯೂನಿವರ್ಸಲ್ ಅಂಶಗಳಿರುವ ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ , ಸೋನಾ , ದಿಶಾ , ಸಂಧ್ಯಾ ವೇಣು , ಶ್ರೀ ಕ್ರೇಜಿಮೈಂಡ್, ಬಲರಾಮ್, ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…