ಚಿತ್ರ ಮಂಜರಿ

ಆದಿಪುರುಷ್‌ಗೆ ವ್ಯಾಪಕ ಆಕ್ರೋಶ: ಸಂಭಾಷಣೆಗಳನ್ನು ಪರಿಷ್ಕರಿಸಲು ಚಿತ್ರ ತಂಡ ನಿರ್ಧಾರ

ಮುಂಬೈ: ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವು ಭಾಷಾ ಬಳಕೆಗಾಗಿ ವ್ಯಾಪಕ ಟೀಕೆಗೋಳಗಾದ ನಂತರ ಪೌರಾಣಿಕ ಕಥಾ ಚಿತ್ರದ ನಿರ್ಮಾಪಕರು “ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು” ನಿರ್ಧರಿಸಿದ್ದಾರೆ ಎಂದು ಚಿತ್ರದ ಸಂಭಾಷಣೆ ಬರಹಗಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿಕೆ ನೀಡಿದ್ದಾರೆ.

ಹಿಂದಿ ಸಂಭಾಷಣೆಗಳು ಮತ್ತು ಹಾಡುಗಳನ್ನು ಬರೆದಿರುವ ಶುಕ್ಲಾ, ಈ ವಾರದೊಳಗೆ ತಿದ್ದುಪಡಿ ಮಾಡಿದ ಸಾಲುಗಳನ್ನು ಚಿತ್ರಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.

“ನನಗೆ ನಿಮ್ಮ ಭಾವನೆಗಳಿಗಿಂತ ದೊಡ್ಡದು ಏನೂ ಇಲ್ಲ. ನನ್ನ ಡೈಲಾಗ್‌ಗಳ ಪರವಾಗಿ ನಾನು ಲೆಕ್ಕವಿಲ್ಲದಷ್ಟು ವಾದಗಳನ್ನು ನೀಡಬಲ್ಲೆ, ಆದರೆ ಇದು ನಿಮ್ಮ ನೋವನ್ನು ಕಡಿಮೆ ಮಾಡುವುದಿಲ್ಲ. ನಾನು ಮತ್ತು ಚಿತ್ರದ ನಿರ್ಮಾಪಕ-ನಿರ್ದೇಶಕರು ನಿಮಗೆ ನೋವುಂಟು ಮಾಡುವ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದೇವೆ. ಅವುಗಳನ್ನು ಈ ವಾರ ಚಿತ್ರಕ್ಕೆ ಸೇರಿಸುತ್ತೇವೆ ಎಂದು ಶುಕ್ಲಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ, ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳಿನಲ್ಲಿ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾದ ”ಆದಿಪುರುಷ್”, ರಾಘವ್ (ರಾಮ) ಆಗಿ ಪ್ರಭಾಸ್, ಜಾನಕಿ (ಸೀತೆ) ಆಗಿ ಕೃತಿ ಸನೋನ್ ಮತ್ತು ಲಂಕೇಶ (ರಾವಣ) ಆಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.

ಓಂ ರಾವುತ್ ನಿರ್ದೇಶಿಸಿದ ಮತ್ತು ಟಿ-ಸೀರೀಸ್ ನಿರ್ಮಿಸಿದ, ಬಿಗ್ ಬಜೆಟ್ ಚಿತ್ರ ”ಆದಿಪುರುಷ್” ಅದರ ಕಳಪೆ ವಿಎಫ್‌ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆಗೆ ಮತ್ತು ಆಕ್ರೋಶಕ್ಕೆ ಒಳಗಾಗಿದೆ. ಶುಕ್ಲಾ ಅವರು ‘ಲಂಕಾ ದಹನ’ ಸನ್ನಿವೇಶದಲ್ಲಿ ಬಳಸಿರುವ ಹನುಮಂತನ ಸಂಭಾಷಣೆಗಾಗಿ ವ್ಯಾಪಕ ಟೀಕೆ ಎದುರಿಸಿದ್ದಾರೆ.

andolanait

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

48 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

59 mins ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago