ಚಿತ್ರ ಮಂಜರಿ

ಆದಿಪುರುಷ್‌ಗೆ ವ್ಯಾಪಕ ಆಕ್ರೋಶ: ಸಂಭಾಷಣೆಗಳನ್ನು ಪರಿಷ್ಕರಿಸಲು ಚಿತ್ರ ತಂಡ ನಿರ್ಧಾರ

ಮುಂಬೈ: ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವು ಭಾಷಾ ಬಳಕೆಗಾಗಿ ವ್ಯಾಪಕ ಟೀಕೆಗೋಳಗಾದ ನಂತರ ಪೌರಾಣಿಕ ಕಥಾ ಚಿತ್ರದ ನಿರ್ಮಾಪಕರು “ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು” ನಿರ್ಧರಿಸಿದ್ದಾರೆ ಎಂದು ಚಿತ್ರದ ಸಂಭಾಷಣೆ ಬರಹಗಾರ ಮನೋಜ್ ಮುಂತಾಶಿರ್ ಶುಕ್ಲಾ ಭಾನುವಾರ ಹೇಳಿಕೆ ನೀಡಿದ್ದಾರೆ.

ಹಿಂದಿ ಸಂಭಾಷಣೆಗಳು ಮತ್ತು ಹಾಡುಗಳನ್ನು ಬರೆದಿರುವ ಶುಕ್ಲಾ, ಈ ವಾರದೊಳಗೆ ತಿದ್ದುಪಡಿ ಮಾಡಿದ ಸಾಲುಗಳನ್ನು ಚಿತ್ರಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.

“ನನಗೆ ನಿಮ್ಮ ಭಾವನೆಗಳಿಗಿಂತ ದೊಡ್ಡದು ಏನೂ ಇಲ್ಲ. ನನ್ನ ಡೈಲಾಗ್‌ಗಳ ಪರವಾಗಿ ನಾನು ಲೆಕ್ಕವಿಲ್ಲದಷ್ಟು ವಾದಗಳನ್ನು ನೀಡಬಲ್ಲೆ, ಆದರೆ ಇದು ನಿಮ್ಮ ನೋವನ್ನು ಕಡಿಮೆ ಮಾಡುವುದಿಲ್ಲ. ನಾನು ಮತ್ತು ಚಿತ್ರದ ನಿರ್ಮಾಪಕ-ನಿರ್ದೇಶಕರು ನಿಮಗೆ ನೋವುಂಟು ಮಾಡುವ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದೇವೆ. ಅವುಗಳನ್ನು ಈ ವಾರ ಚಿತ್ರಕ್ಕೆ ಸೇರಿಸುತ್ತೇವೆ ಎಂದು ಶುಕ್ಲಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ, ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳಿನಲ್ಲಿ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾದ ”ಆದಿಪುರುಷ್”, ರಾಘವ್ (ರಾಮ) ಆಗಿ ಪ್ರಭಾಸ್, ಜಾನಕಿ (ಸೀತೆ) ಆಗಿ ಕೃತಿ ಸನೋನ್ ಮತ್ತು ಲಂಕೇಶ (ರಾವಣ) ಆಗಿ ಸೈಫ್ ಅಲಿ ಖಾನ್ ನಟಿಸಿದ್ದಾರೆ.

ಓಂ ರಾವುತ್ ನಿರ್ದೇಶಿಸಿದ ಮತ್ತು ಟಿ-ಸೀರೀಸ್ ನಿರ್ಮಿಸಿದ, ಬಿಗ್ ಬಜೆಟ್ ಚಿತ್ರ ”ಆದಿಪುರುಷ್” ಅದರ ಕಳಪೆ ವಿಎಫ್‌ಎಕ್ಸ್ ಮತ್ತು ಆಡುಮಾತಿನ ಸಂಭಾಷಣೆಗಳಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆಗೆ ಮತ್ತು ಆಕ್ರೋಶಕ್ಕೆ ಒಳಗಾಗಿದೆ. ಶುಕ್ಲಾ ಅವರು ‘ಲಂಕಾ ದಹನ’ ಸನ್ನಿವೇಶದಲ್ಲಿ ಬಳಸಿರುವ ಹನುಮಂತನ ಸಂಭಾಷಣೆಗಾಗಿ ವ್ಯಾಪಕ ಟೀಕೆ ಎದುರಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago