ಚಿತ್ರ ಮಂಜರಿ

ದೊಡ್ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ : ಯಾರಿದು ಹೊಸ ಅಭ್ಯರ್ಥಿ ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10 ಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್‌ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಬಿಗ್‌ ಬಾಸ್‌ ಮನೆಯೊಳಗೆ ಪವಿತ್ರ ಪೂವಪ್ಪ ಹಾಗೂ ಅಸ್ತಿಕ್‌ ಅವಿನಾಶ್‌ ಶೆಟ್ಟಿ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲರ್ಸ್‌ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ವೈಲ್ಡ್‌ ಕಾರ್ಡ್‌ ಮೂಲಕ ಎಂಟ್ರಿಯಾದ ಅಭ್ಯರ್ಥಿಗಳ ಮೂಕವನ್ನು ರಿವೀಲ್‌ ಮಾಡಿಲ್ಲ. ಹಾಗಾಗಿ ಬಿಗ್‌ ಬಾಸ್‌ ಮನೆಯೋಳಗೆ ಬಂದಿರುವ ಹೊಸ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲ ಮೂಡಿದೆ.

ಆದರೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಮನೆಯೊಳಗೆ ಬಂದಿರುವ ಇಬ್ಬರು ಅಬ್ಯರ್ಥಿಗಳ ಪೈಕಿ ಪವಿತ್ರ ಪೂವಪ್ಪ ಅವರು ಮಾಡೆಲ್‌ ಆಗಿದ್ದು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸಖತ್‌ ಬೋಲ್ಡ್‌ ಆಗಿ ಫೋಟೊಶೂಟ್‌ ಮಾಡಿಸಿ ಮಿಂಚಿದ್ದಾರೆ. ಇದೀಗ ಅಷ್ಟೇ ಬೋಲ್ಡ್‌ ಆಗಿ ಕೆಂಪು ಬಣ್ಣದ ಕಾರಿನಲ್ಲಿ ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗಿದ್ದು, ದೊಡ್ಮನೆಯಲ್ಲಿ ಪವಿತ್ರ ಅವರ ಆಟ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನೂ ಮನೆಯೊಳಗೆ ಬಂದಿರುವ ಮತ್ತೊಬ್ಬ ಅಭ್ಯರ್ಥಿ ಅಸ್ತಿಕ್‌ ಅವಿನಾಶ್‌ ಶೆಟ್ಟಿಯವರು ಒಬ್ಬ ನಟನಾಗಿದ್ದು ಶ್ರೀಮಂತ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನು ಮನೆಯೊಳಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಆಗುತ್ತಿದ್ದಂತೆ ಮನೆಯೊಳಗಿದ್ದ ಸ್ಪರ್ದಿಗಳಿಗೆ ಚಿಂತೆ ಶುರುವಾದಂತಿದೆ. ಕಲರ್ಸ್‌ ಕನ್ನಡ ಹಂಚಿಕೊಂಡಿರುವ ಪ್ರೋಮೋದಲ್ಲಿ ಪವಿತ್ರ ಅವರು ಈ ಶಾಕ್‌ ಬೇಕು. ಅವರಿಗೆ ಬೆವರು ಇಳಿಸೋಣ ಎಂದಿದ್ದಾರೆ. ಇನ್ನು ವಿನಯ್‌ ಕಾರ್ತಿಕ್‌ ಬಳಿ ವೈಲ್ಡ್‌ ಕಾರ್ಡ್‌ ಎಂಟ್ರಿ ಆದರೆ ಹಾಟ್‌ ಸೀಟ್‌ ಗಳಾಗುತ್ತವೆ ಎಂದಿದ್ದಾರೆ.

lokesh

Recent Posts

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

6 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

21 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

37 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

1 hour ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

1 hour ago