ಚಿತ್ರ ಮಂಜರಿ

ದೊಡ್ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ : ಯಾರಿದು ಹೊಸ ಅಭ್ಯರ್ಥಿ ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10 ಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್‌ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಬಿಗ್‌ ಬಾಸ್‌ ಮನೆಯೊಳಗೆ ಪವಿತ್ರ ಪೂವಪ್ಪ ಹಾಗೂ ಅಸ್ತಿಕ್‌ ಅವಿನಾಶ್‌ ಶೆಟ್ಟಿ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲರ್ಸ್‌ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ವೈಲ್ಡ್‌ ಕಾರ್ಡ್‌ ಮೂಲಕ ಎಂಟ್ರಿಯಾದ ಅಭ್ಯರ್ಥಿಗಳ ಮೂಕವನ್ನು ರಿವೀಲ್‌ ಮಾಡಿಲ್ಲ. ಹಾಗಾಗಿ ಬಿಗ್‌ ಬಾಸ್‌ ಮನೆಯೋಳಗೆ ಬಂದಿರುವ ಹೊಸ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲ ಮೂಡಿದೆ.

ಆದರೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಮನೆಯೊಳಗೆ ಬಂದಿರುವ ಇಬ್ಬರು ಅಬ್ಯರ್ಥಿಗಳ ಪೈಕಿ ಪವಿತ್ರ ಪೂವಪ್ಪ ಅವರು ಮಾಡೆಲ್‌ ಆಗಿದ್ದು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸಖತ್‌ ಬೋಲ್ಡ್‌ ಆಗಿ ಫೋಟೊಶೂಟ್‌ ಮಾಡಿಸಿ ಮಿಂಚಿದ್ದಾರೆ. ಇದೀಗ ಅಷ್ಟೇ ಬೋಲ್ಡ್‌ ಆಗಿ ಕೆಂಪು ಬಣ್ಣದ ಕಾರಿನಲ್ಲಿ ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗಿದ್ದು, ದೊಡ್ಮನೆಯಲ್ಲಿ ಪವಿತ್ರ ಅವರ ಆಟ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನೂ ಮನೆಯೊಳಗೆ ಬಂದಿರುವ ಮತ್ತೊಬ್ಬ ಅಭ್ಯರ್ಥಿ ಅಸ್ತಿಕ್‌ ಅವಿನಾಶ್‌ ಶೆಟ್ಟಿಯವರು ಒಬ್ಬ ನಟನಾಗಿದ್ದು ಶ್ರೀಮಂತ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನು ಮನೆಯೊಳಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಆಗುತ್ತಿದ್ದಂತೆ ಮನೆಯೊಳಗಿದ್ದ ಸ್ಪರ್ದಿಗಳಿಗೆ ಚಿಂತೆ ಶುರುವಾದಂತಿದೆ. ಕಲರ್ಸ್‌ ಕನ್ನಡ ಹಂಚಿಕೊಂಡಿರುವ ಪ್ರೋಮೋದಲ್ಲಿ ಪವಿತ್ರ ಅವರು ಈ ಶಾಕ್‌ ಬೇಕು. ಅವರಿಗೆ ಬೆವರು ಇಳಿಸೋಣ ಎಂದಿದ್ದಾರೆ. ಇನ್ನು ವಿನಯ್‌ ಕಾರ್ತಿಕ್‌ ಬಳಿ ವೈಲ್ಡ್‌ ಕಾರ್ಡ್‌ ಎಂಟ್ರಿ ಆದರೆ ಹಾಟ್‌ ಸೀಟ್‌ ಗಳಾಗುತ್ತವೆ ಎಂದಿದ್ದಾರೆ.

lokesh

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

33 seconds ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago