ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ.
ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ ಮನೆಯೊಳಗೆ ಪವಿತ್ರ ಪೂವಪ್ಪ ಹಾಗೂ ಅಸ್ತಿಕ್ ಅವಿನಾಶ್ ಶೆಟ್ಟಿ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಯಾದ ಅಭ್ಯರ್ಥಿಗಳ ಮೂಕವನ್ನು ರಿವೀಲ್ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ಮನೆಯೋಳಗೆ ಬಂದಿರುವ ಹೊಸ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲ ಮೂಡಿದೆ.
ಆದರೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ಬಂದಿರುವ ಇಬ್ಬರು ಅಬ್ಯರ್ಥಿಗಳ ಪೈಕಿ ಪವಿತ್ರ ಪೂವಪ್ಪ ಅವರು ಮಾಡೆಲ್ ಆಗಿದ್ದು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸಖತ್ ಬೋಲ್ಡ್ ಆಗಿ ಫೋಟೊಶೂಟ್ ಮಾಡಿಸಿ ಮಿಂಚಿದ್ದಾರೆ. ಇದೀಗ ಅಷ್ಟೇ ಬೋಲ್ಡ್ ಆಗಿ ಕೆಂಪು ಬಣ್ಣದ ಕಾರಿನಲ್ಲಿ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದು, ದೊಡ್ಮನೆಯಲ್ಲಿ ಪವಿತ್ರ ಅವರ ಆಟ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇನ್ನೂ ಮನೆಯೊಳಗೆ ಬಂದಿರುವ ಮತ್ತೊಬ್ಬ ಅಭ್ಯರ್ಥಿ ಅಸ್ತಿಕ್ ಅವಿನಾಶ್ ಶೆಟ್ಟಿಯವರು ಒಬ್ಬ ನಟನಾಗಿದ್ದು ಶ್ರೀಮಂತ ಚಿತ್ರದಲ್ಲಿ ನಟಿಸಿದ್ದಾರೆ.
ಇನ್ನು ಮನೆಯೊಳಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗುತ್ತಿದ್ದಂತೆ ಮನೆಯೊಳಗಿದ್ದ ಸ್ಪರ್ದಿಗಳಿಗೆ ಚಿಂತೆ ಶುರುವಾದಂತಿದೆ. ಕಲರ್ಸ್ ಕನ್ನಡ ಹಂಚಿಕೊಂಡಿರುವ ಪ್ರೋಮೋದಲ್ಲಿ ಪವಿತ್ರ ಅವರು ಈ ಶಾಕ್ ಬೇಕು. ಅವರಿಗೆ ಬೆವರು ಇಳಿಸೋಣ ಎಂದಿದ್ದಾರೆ. ಇನ್ನು ವಿನಯ್ ಕಾರ್ತಿಕ್ ಬಳಿ ವೈಲ್ಡ್ ಕಾರ್ಡ್ ಎಂಟ್ರಿ ಆದರೆ ಹಾಟ್ ಸೀಟ್ ಗಳಾಗುತ್ತವೆ ಎಂದಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…