ಚಿತ್ರ ಮಂಜರಿ

ದೊಡ್ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ : ಯಾರಿದು ಹೊಸ ಅಭ್ಯರ್ಥಿ ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10 ಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್‌ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಬಿಗ್‌ ಬಾಸ್‌ ಮನೆಯೊಳಗೆ ಪವಿತ್ರ ಪೂವಪ್ಪ ಹಾಗೂ ಅಸ್ತಿಕ್‌ ಅವಿನಾಶ್‌ ಶೆಟ್ಟಿ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲರ್ಸ್‌ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ವೈಲ್ಡ್‌ ಕಾರ್ಡ್‌ ಮೂಲಕ ಎಂಟ್ರಿಯಾದ ಅಭ್ಯರ್ಥಿಗಳ ಮೂಕವನ್ನು ರಿವೀಲ್‌ ಮಾಡಿಲ್ಲ. ಹಾಗಾಗಿ ಬಿಗ್‌ ಬಾಸ್‌ ಮನೆಯೋಳಗೆ ಬಂದಿರುವ ಹೊಸ ಅಭ್ಯರ್ಥಿಗಳು ಯಾರು ಎನ್ನುವ ಕುತೂಹಲ ಮೂಡಿದೆ.

ಆದರೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಮನೆಯೊಳಗೆ ಬಂದಿರುವ ಇಬ್ಬರು ಅಬ್ಯರ್ಥಿಗಳ ಪೈಕಿ ಪವಿತ್ರ ಪೂವಪ್ಪ ಅವರು ಮಾಡೆಲ್‌ ಆಗಿದ್ದು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸಖತ್‌ ಬೋಲ್ಡ್‌ ಆಗಿ ಫೋಟೊಶೂಟ್‌ ಮಾಡಿಸಿ ಮಿಂಚಿದ್ದಾರೆ. ಇದೀಗ ಅಷ್ಟೇ ಬೋಲ್ಡ್‌ ಆಗಿ ಕೆಂಪು ಬಣ್ಣದ ಕಾರಿನಲ್ಲಿ ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗಿದ್ದು, ದೊಡ್ಮನೆಯಲ್ಲಿ ಪವಿತ್ರ ಅವರ ಆಟ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನೂ ಮನೆಯೊಳಗೆ ಬಂದಿರುವ ಮತ್ತೊಬ್ಬ ಅಭ್ಯರ್ಥಿ ಅಸ್ತಿಕ್‌ ಅವಿನಾಶ್‌ ಶೆಟ್ಟಿಯವರು ಒಬ್ಬ ನಟನಾಗಿದ್ದು ಶ್ರೀಮಂತ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನು ಮನೆಯೊಳಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಆಗುತ್ತಿದ್ದಂತೆ ಮನೆಯೊಳಗಿದ್ದ ಸ್ಪರ್ದಿಗಳಿಗೆ ಚಿಂತೆ ಶುರುವಾದಂತಿದೆ. ಕಲರ್ಸ್‌ ಕನ್ನಡ ಹಂಚಿಕೊಂಡಿರುವ ಪ್ರೋಮೋದಲ್ಲಿ ಪವಿತ್ರ ಅವರು ಈ ಶಾಕ್‌ ಬೇಕು. ಅವರಿಗೆ ಬೆವರು ಇಳಿಸೋಣ ಎಂದಿದ್ದಾರೆ. ಇನ್ನು ವಿನಯ್‌ ಕಾರ್ತಿಕ್‌ ಬಳಿ ವೈಲ್ಡ್‌ ಕಾರ್ಡ್‌ ಎಂಟ್ರಿ ಆದರೆ ಹಾಟ್‌ ಸೀಟ್‌ ಗಳಾಗುತ್ತವೆ ಎಂದಿದ್ದಾರೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago