ಚಿತ್ರ ಮಂಜರಿ

ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ಪ್ರಭಾಸ್ ʼಆದಿಪುರುಷ್‌ʼ

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್‌ ಅವರ ʼಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿ ಎಲ್ಲೆಡೆ ಭರ್ಜರಿ ಸೌಂಡ್‌ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್‌ ಒಂದು ಹೊಸ ದಾಖಲೆಯನ್ನು ಬರೆದಿದೆ.

ʼಆದಿಪುರುಷ್‌ʼ ಚಿತ್ರಕ್ಕೆ ಓಂ ರಾವುತ್‌ ಅವರ ನಿರ್ದೇಶನವಿದೆ. “ಟಿ-ಸೀರಿಸ್‌ʼ ಸಂಸ್ಥೆ ನಿರ್ಮಾಣ ಮಾಡಿದ್ದು, ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.

ಸಿನಿಮಾದಲ್ಲಿ ಪ್ರಭಾಸ್‌ ʼರಾಘವʼನಾಗಿ, ಕೃತಿ ಸನೊನ್ ʼಜಾನಕಿʼ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೈಫ್‌ ಆಲಿಖಾನ್‌ ರಾವಣನ ಅವತಾರದಲ್ಲಿ ಅಬ್ಬರಿಸಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್‌ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ವಿಎಫ್‌ ಎಕ್ಸ್‌, ಮ್ಯೂಸಿಕ್‌ ನಿಂದ ಟ್ರೇಲರ್‌ ಗಮನ ಸೆಳೆದಿದೆ. ಪ್ಯಾನ್‌ ಇಂಡಿಯಾದಲ್ಲಿ ಟ್ರೇಲರ್‌ ಸದ್ದು ಮಾಡಿದೆ. ಎಲ್ಲಾ ಭಾಷೆಯಲ್ಲಿ ಸೇರಿ ರಿಲೀಸ್‌ ಆದ 24 ಗಂಟೆಯಲ್ಲಿ ಟ್ರೇಲರ್‌ 70 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ. ಆ ಮೂಲಕ 2023ರಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಟ್ರೇಲರ್‌ ಎಂಬ ಹೆಗ್ಗಳಿಕೆಯನ್ನು ʼಆದಿಪುರುಷ್‌ʼ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೆ ಯೂಟ್ಯೂಬ್‌ ನಲ್ಲಿ ಟ್ರೇಲರ್‌  ನಂ. 1  ಆಗಿ ಟ್ರೆಂಡಿಂಗ್‌ ನಲ್ಲಿದೆ.

ಇದೇ ಜೂ.16 ರಂದು 3ಡಿಯಲ್ಲಿ ವಿಶ್ವಾದಂತ್ಯ ಸಿನಿಮಾ ತೆರೆಗೆ ಬರಲಿದೆ.

andolanait

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

5 hours ago