ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್ ಅವರ ʼಆದಿಪುರುಷ್ʼ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಎಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್ ಒಂದು ಹೊಸ ದಾಖಲೆಯನ್ನು ಬರೆದಿದೆ.
ʼಆದಿಪುರುಷ್ʼ ಚಿತ್ರಕ್ಕೆ ಓಂ ರಾವುತ್ ಅವರ ನಿರ್ದೇಶನವಿದೆ. “ಟಿ-ಸೀರಿಸ್ʼ ಸಂಸ್ಥೆ ನಿರ್ಮಾಣ ಮಾಡಿದ್ದು, ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.
ಸಿನಿಮಾದಲ್ಲಿ ಪ್ರಭಾಸ್ ʼರಾಘವʼನಾಗಿ, ಕೃತಿ ಸನೊನ್ ʼಜಾನಕಿʼ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೈಫ್ ಆಲಿಖಾನ್ ರಾವಣನ ಅವತಾರದಲ್ಲಿ ಅಬ್ಬರಿಸಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.
ವಿಎಫ್ ಎಕ್ಸ್, ಮ್ಯೂಸಿಕ್ ನಿಂದ ಟ್ರೇಲರ್ ಗಮನ ಸೆಳೆದಿದೆ. ಪ್ಯಾನ್ ಇಂಡಿಯಾದಲ್ಲಿ ಟ್ರೇಲರ್ ಸದ್ದು ಮಾಡಿದೆ. ಎಲ್ಲಾ ಭಾಷೆಯಲ್ಲಿ ಸೇರಿ ರಿಲೀಸ್ ಆದ 24 ಗಂಟೆಯಲ್ಲಿ ಟ್ರೇಲರ್ 70 ಮಿಲಿಯನ್ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ. ಆ ಮೂಲಕ 2023ರಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಟ್ರೇಲರ್ ಎಂಬ ಹೆಗ್ಗಳಿಕೆಯನ್ನು ʼಆದಿಪುರುಷ್ʼ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೆ ಯೂಟ್ಯೂಬ್ ನಲ್ಲಿ ಟ್ರೇಲರ್ ನಂ. 1 ಆಗಿ ಟ್ರೆಂಡಿಂಗ್ ನಲ್ಲಿದೆ.
ಇದೇ ಜೂ.16 ರಂದು 3ಡಿಯಲ್ಲಿ ವಿಶ್ವಾದಂತ್ಯ ಸಿನಿಮಾ ತೆರೆಗೆ ಬರಲಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…