ಚಿತ್ರ ಮಂಜರಿ

ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ಪ್ರಭಾಸ್ ʼಆದಿಪುರುಷ್‌ʼ

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಚಿತ್ರಗಳಲ್ಲಿ ಒಂದಾಗಿರುವ ಪ್ರಭಾಸ್‌ ಅವರ ʼಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿ ಎಲ್ಲೆಡೆ ಭರ್ಜರಿ ಸೌಂಡ್‌ ಮಾಡುತ್ತಿದೆ. ಈ ನಡುವೆ ಸಿನಿಮಾದ ಟ್ರೇಲರ್‌ ಒಂದು ಹೊಸ ದಾಖಲೆಯನ್ನು ಬರೆದಿದೆ.

ʼಆದಿಪುರುಷ್‌ʼ ಚಿತ್ರಕ್ಕೆ ಓಂ ರಾವುತ್‌ ಅವರ ನಿರ್ದೇಶನವಿದೆ. “ಟಿ-ಸೀರಿಸ್‌ʼ ಸಂಸ್ಥೆ ನಿರ್ಮಾಣ ಮಾಡಿದ್ದು, ವಾಲ್ಮೀಕಿ ಬರೆದ ರಾಮಾಯಣದ ಅಂಶಗಳನ್ನು ಆಧರಿಸಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ.

ಸಿನಿಮಾದಲ್ಲಿ ಪ್ರಭಾಸ್‌ ʼರಾಘವʼನಾಗಿ, ಕೃತಿ ಸನೊನ್ ʼಜಾನಕಿʼ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೈಫ್‌ ಆಲಿಖಾನ್‌ ರಾವಣನ ಅವತಾರದಲ್ಲಿ ಅಬ್ಬರಿಸಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್‌ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ವಿಎಫ್‌ ಎಕ್ಸ್‌, ಮ್ಯೂಸಿಕ್‌ ನಿಂದ ಟ್ರೇಲರ್‌ ಗಮನ ಸೆಳೆದಿದೆ. ಪ್ಯಾನ್‌ ಇಂಡಿಯಾದಲ್ಲಿ ಟ್ರೇಲರ್‌ ಸದ್ದು ಮಾಡಿದೆ. ಎಲ್ಲಾ ಭಾಷೆಯಲ್ಲಿ ಸೇರಿ ರಿಲೀಸ್‌ ಆದ 24 ಗಂಟೆಯಲ್ಲಿ ಟ್ರೇಲರ್‌ 70 ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆ ಕಂಡಿದೆ. ಆ ಮೂಲಕ 2023ರಲ್ಲಿ ಅತೀ ಹೆಚ್ಚು ವೀಕ್ಷಣೆ ಕಂಡ ಟ್ರೇಲರ್‌ ಎಂಬ ಹೆಗ್ಗಳಿಕೆಯನ್ನು ʼಆದಿಪುರುಷ್‌ʼ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೆ ಯೂಟ್ಯೂಬ್‌ ನಲ್ಲಿ ಟ್ರೇಲರ್‌  ನಂ. 1  ಆಗಿ ಟ್ರೆಂಡಿಂಗ್‌ ನಲ್ಲಿದೆ.

ಇದೇ ಜೂ.16 ರಂದು 3ಡಿಯಲ್ಲಿ ವಿಶ್ವಾದಂತ್ಯ ಸಿನಿಮಾ ತೆರೆಗೆ ಬರಲಿದೆ.

andolanait

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

44 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

10 hours ago