ಚಿತ್ರ ಮಂಜರಿ

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್‌ ಹೆಸರು ಕೈಬಿಟ್ಟ ಪೊಲೀಸರು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಕು ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯ ವೇಳೆ ಚಾರ್ಜ್‌ಶೀಟ್‌ನಿಂದ ದರ್ಶನ್ ಅವರ ಹೆಸರನ್ನು ಕೈಬಿಡಲಾಗಿದೆ.

ಆರ್.ಆರ್ ನಗರ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು.

ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ದರ್ಶನ್ ಹೆಸರು ಕೈಬಿಟ್ಟಿದ್ದು ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಚಾರ್ಜ್‌ ಶೀಟ್‌ ಸಲ್ಲಿಕೆಯ ವೇಳೆ ಉಲ್ಲೇಖಿಸಿದ್ದಾರೆ.

ಪ್ರಕರಣವೇನು: 2023ರ ಅಕ್ಟೋಬರ್ 28ರಂದು ದರ್ಶನ್ ಮನೆಯ ಸಾಕು ನಾಯಿ ಅಮಿತಾ ಜಿಂದಾಲ್ ಎಂಬ ಮಹಿಳೆಗೆ ಕಚ್ಚಿತ್ತು. ಅಂದು ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್‌ಐಆರ್ ನಲ್ಲಿ ಉಲ್ಲೇಖಿಸಿ ದರ್ಶನ್‌ಗೆ ನೊಟೀಸ್‌ ನೀಡಲಾಗಿತ್ತು.

andolanait

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

11 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

4 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

18 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

19 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

20 hours ago