ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಕು ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಆರ್.ಆರ್ ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯ ವೇಳೆ ಚಾರ್ಜ್ಶೀಟ್ನಿಂದ ದರ್ಶನ್ ಅವರ ಹೆಸರನ್ನು ಕೈಬಿಡಲಾಗಿದೆ.
ಆರ್.ಆರ್ ನಗರ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು.
ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ದರ್ಶನ್ ಹೆಸರು ಕೈಬಿಟ್ಟಿದ್ದು ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಚಾರ್ಜ್ ಶೀಟ್ ಸಲ್ಲಿಕೆಯ ವೇಳೆ ಉಲ್ಲೇಖಿಸಿದ್ದಾರೆ.
ಪ್ರಕರಣವೇನು: 2023ರ ಅಕ್ಟೋಬರ್ 28ರಂದು ದರ್ಶನ್ ಮನೆಯ ಸಾಕು ನಾಯಿ ಅಮಿತಾ ಜಿಂದಾಲ್ ಎಂಬ ಮಹಿಳೆಗೆ ಕಚ್ಚಿತ್ತು. ಅಂದು ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್ಐಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್ಐಆರ್ ನಲ್ಲಿ ಉಲ್ಲೇಖಿಸಿ ದರ್ಶನ್ಗೆ ನೊಟೀಸ್ ನೀಡಲಾಗಿತ್ತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…