ಚಿತ್ರ ಮಂಜರಿ

ನಾನು ರಿಲ್ಯಾಕ್ಸ್‌ ಆಗಿ ಕೂತಿಲ್ಲ; ಯಶ್‌ 19 ಚಿತ್ರದ ಅಪ್‌ಡೇಟ್‌ ಬಗ್ಗೆ ವೇದಿಕೆ ಮೇಲೆ ಮಾತನಾಡಿದ ಯಶ್‌

ಕೆಜಿಎಫ್‌ ಚಿತ್ರ ಸರಣಿಯ ಬೃಹತ್‌ ಸಕ್ಸಸ್‌ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಕಳೆದ ವರ್ಷ ಏಪ್ರಿಲ್‌ 14ರಂದು ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾದ ಬಳಿಕ ಯಶ್‌ ನಟನೆಯ ಯಾವ ಚಿತ್ರವೂ ತೆರೆಗೆ ಬಂದಿಲ್ಲ. ವರ್ಷದ ಮೇಲೆ ಏಳು ತಿಂಗಳು ಕಳೆದಿದ್ದರೂ ಯಶ್‌ ತಾವು ಮುಂದೆ ಯಾವ ಚಿತ್ರದಲ್ಲಿ ನಟಿಸುತ್ತೇನೆ ಎಂಬ ಮಾಹಿತಿಯನ್ನೂ ಸಹ ಬಿಟ್ಟುಕೊಟ್ಟಿಲ್ಲ.

ಯಶ್‌ ಶ್ರೀಲಂಕಾ, ಇಂಗ್ಲೆಂಡ್‌ ಸೇರಿದಂತೆ ವಿವಿಧ ದೇಶಗಳ ಪ್ರಯಾಣ ಕೈಗೊಂಡಿರುವ ಸುದ್ದಿಗಳು ಹೊರಬೀಳುತ್ತಿವೆಯೇ ಹೊರತು ಮುಂದಿನ ಚಿತ್ರ ಬಗ್ಗೆ ಮಾತ್ರ ಯಾವುದೇ ಮಾಹಿತಿ ಇಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಈ ಕುರಿತು ವಾರಕ್ಕೊಂದು ಹೊಸ ಅಂತೆಕಂತೆಗಳು ಹರಿದಾಡುತ್ತಿದ್ದು ಯಶ್‌ 19 ಚಿತ್ರ ಆ ನಿರ್ದೇಶಕರ ಜತೆಯಂತೆ, ಈ ದಿನದಂದು ಚಿತ್ರದ ಘೋಷಣೆಯಾಗಲಿದೆಯಂತೆ ಎಂಬ ಸುದ್ದಿಗಳು ವೈರಲ್ ಆಗುತ್ತಲೇ ಇವೆ.

ಇದೀಗ ಇಂತಹ ಸುದ್ದಿಗಳ ಬಗ್ಗೆ ಹಾಗೂ ತಮ್ಮ ಮುಂದಿನ ಚಿತ್ರದ ಘೋಷಣೆಯ ಬಗ್ಗೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಹೌದು, ನಿನ್ನೆ ( ನವೆಂಬರ್‌ 23 ) ನಡೆದ ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ತಾವೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದಾರೆ.

“ಒಳ್ಳೊಳ್ಳೆ ಹೊಸ ಕಲಾವಿದರು ಬರುತ್ತಾ ಇದ್ದಾರೆ. ಅವರ ಚಿತ್ರಗಳನ್ನು ನೋಡಿ ಬೆನ್ನು ತಟ್ಟಿ. ನಮಗೂ ನೀವು ಬೆನ್ನು ತಟ್ಟಿದ್ದಕ್ಕೆ ನಾನು ಇವತ್ತು ಈ ಸ್ಥಾನದಲ್ಲಿರೋದು. ನೀವೆಲ್ಲಾ ಕೇಳ್ತಾ ಇದೀರ ನನಗೆ ಗೊತ್ತು ಅಪ್‌ಡೇಟ್‌ ಅಂತ. ಒಂದು ವಿಷಯ ಹೇಳ್ತೀನಿ, ನಾನು ಕೂತಿದೀನಿ ಅಂದ್ರೆ ಅದು ನೀವು ಕೊಟ್ಟ ಧೈರ್ಯದಿಂದ. ಹಂಗಂತ ನಾನು ರಿಲ್ಯಾಕ್ಸ್‌ ಆಗಿ ಕೂತಿಲ್ಲ. ನೀವು ಕೊಟ್ಟಿರೋ ಸಕ್ಸಸ್‌ ಜವಾಬ್ದಾರಿ ಅಂತ ತಿಳಿದುಕೊಂಡು ಇನ್ನೂ ಮುಂದೆ ಕೆಲಸ ಮಾಡಬೇಕು ಅಂತ ಮುಂದಿನ ಹಂತಕ್ಕೋಸ್ಕರ ಪ್ರಿಪೇರ್‌ ಆಗ್ತಾ ಇದೀನಿ, ಕೆಲಸ ಮಾಡ್ತೀನಿ. ತಾಳ್ಮೆ ಇಟ್ಟುಕೊಳ್ಳಿ, ನಾನು ಯಾವತ್ತೂ ಅನೌನ್ಸ್‌ಮೆಂಟ್‌ ಅಂತ ಹೇಳಿಲ್ಲ. ತುಂಬಾ ಜನ ಅವರ ಖುಷಿಗೆ ಪ್ರತಿ ಹಬ್ಬ ಬಂದಾಗ, ಯಾವುದೇ ತಿಂಗಳು ಬಂದಾಗಲೂ ಈ ತಿಂಗಳು ಅಪ್‌ಡೇಟ್‌ ಅಂತ ಹೇಳಿ ಹೇಳಿ ನಿಮಗೆ ಆ ತಾಳ್ಮೆ ಲೆವೆಲ್‌ ಹೋಗ್ತಿದೆ, ಮಿಸ್‌ಗೈಡ್‌ ಆಗ್ತಿದೆ. ನಾನೇ ಹೇಳ್ತೀನಿ, ಅಡುಗೆ ಬೆಂದಮೇಲೆ ಬಡಿಸಬೇಕು, ಮುಂಚೆನೇ ಮಾಡೋಕೆ ನನಗೆ ಇಷ್ಟ ಇಲ್ಲ, ಸ್ವಲ್ಪ ತಾಳ್ಮೆ ಇಟ್ಟುಕೊಳ್ಳಿ, ನಿಮಗೆ ಇಷ್ಟವಾಗುವಂತ ಕೆಲಸ ಆಗುತ್ತೆ, ಥ್ಯಾಂಕ್ಯೂ” ಎಂದು ಯಶ್‌ ಹೇಳಿಕೆ ನೀಡಿದರು.

andolana

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

1 hour ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

1 hour ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago