ಚಿತ್ರ ಮಂಜರಿ

ನಾನು ರಿಲ್ಯಾಕ್ಸ್‌ ಆಗಿ ಕೂತಿಲ್ಲ; ಯಶ್‌ 19 ಚಿತ್ರದ ಅಪ್‌ಡೇಟ್‌ ಬಗ್ಗೆ ವೇದಿಕೆ ಮೇಲೆ ಮಾತನಾಡಿದ ಯಶ್‌

ಕೆಜಿಎಫ್‌ ಚಿತ್ರ ಸರಣಿಯ ಬೃಹತ್‌ ಸಕ್ಸಸ್‌ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಕಳೆದ ವರ್ಷ ಏಪ್ರಿಲ್‌ 14ರಂದು ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾದ ಬಳಿಕ ಯಶ್‌ ನಟನೆಯ ಯಾವ ಚಿತ್ರವೂ ತೆರೆಗೆ ಬಂದಿಲ್ಲ. ವರ್ಷದ ಮೇಲೆ ಏಳು ತಿಂಗಳು ಕಳೆದಿದ್ದರೂ ಯಶ್‌ ತಾವು ಮುಂದೆ ಯಾವ ಚಿತ್ರದಲ್ಲಿ ನಟಿಸುತ್ತೇನೆ ಎಂಬ ಮಾಹಿತಿಯನ್ನೂ ಸಹ ಬಿಟ್ಟುಕೊಟ್ಟಿಲ್ಲ.

ಯಶ್‌ ಶ್ರೀಲಂಕಾ, ಇಂಗ್ಲೆಂಡ್‌ ಸೇರಿದಂತೆ ವಿವಿಧ ದೇಶಗಳ ಪ್ರಯಾಣ ಕೈಗೊಂಡಿರುವ ಸುದ್ದಿಗಳು ಹೊರಬೀಳುತ್ತಿವೆಯೇ ಹೊರತು ಮುಂದಿನ ಚಿತ್ರ ಬಗ್ಗೆ ಮಾತ್ರ ಯಾವುದೇ ಮಾಹಿತಿ ಇಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಈ ಕುರಿತು ವಾರಕ್ಕೊಂದು ಹೊಸ ಅಂತೆಕಂತೆಗಳು ಹರಿದಾಡುತ್ತಿದ್ದು ಯಶ್‌ 19 ಚಿತ್ರ ಆ ನಿರ್ದೇಶಕರ ಜತೆಯಂತೆ, ಈ ದಿನದಂದು ಚಿತ್ರದ ಘೋಷಣೆಯಾಗಲಿದೆಯಂತೆ ಎಂಬ ಸುದ್ದಿಗಳು ವೈರಲ್ ಆಗುತ್ತಲೇ ಇವೆ.

ಇದೀಗ ಇಂತಹ ಸುದ್ದಿಗಳ ಬಗ್ಗೆ ಹಾಗೂ ತಮ್ಮ ಮುಂದಿನ ಚಿತ್ರದ ಘೋಷಣೆಯ ಬಗ್ಗೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಹೌದು, ನಿನ್ನೆ ( ನವೆಂಬರ್‌ 23 ) ನಡೆದ ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ತಾವೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದಾರೆ.

“ಒಳ್ಳೊಳ್ಳೆ ಹೊಸ ಕಲಾವಿದರು ಬರುತ್ತಾ ಇದ್ದಾರೆ. ಅವರ ಚಿತ್ರಗಳನ್ನು ನೋಡಿ ಬೆನ್ನು ತಟ್ಟಿ. ನಮಗೂ ನೀವು ಬೆನ್ನು ತಟ್ಟಿದ್ದಕ್ಕೆ ನಾನು ಇವತ್ತು ಈ ಸ್ಥಾನದಲ್ಲಿರೋದು. ನೀವೆಲ್ಲಾ ಕೇಳ್ತಾ ಇದೀರ ನನಗೆ ಗೊತ್ತು ಅಪ್‌ಡೇಟ್‌ ಅಂತ. ಒಂದು ವಿಷಯ ಹೇಳ್ತೀನಿ, ನಾನು ಕೂತಿದೀನಿ ಅಂದ್ರೆ ಅದು ನೀವು ಕೊಟ್ಟ ಧೈರ್ಯದಿಂದ. ಹಂಗಂತ ನಾನು ರಿಲ್ಯಾಕ್ಸ್‌ ಆಗಿ ಕೂತಿಲ್ಲ. ನೀವು ಕೊಟ್ಟಿರೋ ಸಕ್ಸಸ್‌ ಜವಾಬ್ದಾರಿ ಅಂತ ತಿಳಿದುಕೊಂಡು ಇನ್ನೂ ಮುಂದೆ ಕೆಲಸ ಮಾಡಬೇಕು ಅಂತ ಮುಂದಿನ ಹಂತಕ್ಕೋಸ್ಕರ ಪ್ರಿಪೇರ್‌ ಆಗ್ತಾ ಇದೀನಿ, ಕೆಲಸ ಮಾಡ್ತೀನಿ. ತಾಳ್ಮೆ ಇಟ್ಟುಕೊಳ್ಳಿ, ನಾನು ಯಾವತ್ತೂ ಅನೌನ್ಸ್‌ಮೆಂಟ್‌ ಅಂತ ಹೇಳಿಲ್ಲ. ತುಂಬಾ ಜನ ಅವರ ಖುಷಿಗೆ ಪ್ರತಿ ಹಬ್ಬ ಬಂದಾಗ, ಯಾವುದೇ ತಿಂಗಳು ಬಂದಾಗಲೂ ಈ ತಿಂಗಳು ಅಪ್‌ಡೇಟ್‌ ಅಂತ ಹೇಳಿ ಹೇಳಿ ನಿಮಗೆ ಆ ತಾಳ್ಮೆ ಲೆವೆಲ್‌ ಹೋಗ್ತಿದೆ, ಮಿಸ್‌ಗೈಡ್‌ ಆಗ್ತಿದೆ. ನಾನೇ ಹೇಳ್ತೀನಿ, ಅಡುಗೆ ಬೆಂದಮೇಲೆ ಬಡಿಸಬೇಕು, ಮುಂಚೆನೇ ಮಾಡೋಕೆ ನನಗೆ ಇಷ್ಟ ಇಲ್ಲ, ಸ್ವಲ್ಪ ತಾಳ್ಮೆ ಇಟ್ಟುಕೊಳ್ಳಿ, ನಿಮಗೆ ಇಷ್ಟವಾಗುವಂತ ಕೆಲಸ ಆಗುತ್ತೆ, ಥ್ಯಾಂಕ್ಯೂ” ಎಂದು ಯಶ್‌ ಹೇಳಿಕೆ ನೀಡಿದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago