ಚಿತ್ರ ಮಂಜರಿ

ಕೆಜಿಎಫ್‌ಗೂ ಮುಂಚೆ ಅವನು ಯಾರು? ಯಶ್ ಬಗ್ಗೆ ನಾಲಿಗೆ ಹರಿಬಿಟ್ಟ ಅಲ್ಲು ಅರ್ಜುನ್ ತಂದೆ!

ರಾಕಿಂಗ್ ಸ್ಟಾರ್ ಯಶ್.. ಸಿಲ್ಲಿ ಲಲ್ಲಿ ರೀತಿಯ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ನಿರ್ವಹಿಸಿ ಬಳಿಕ ತನ್ನ ಪ್ರತಿಭೆಯಿಂದ ಚಲನಚಿತ್ರಗಳಲ್ಲಿ ಸಣ್ಣ ರೋಲ್‌ಗಳನ್ನು ಗಿಟ್ಟಿಸಿಕೊಂಡು ನಾಯಕ ನಟನಾಗಿ ಬಡ್ತಿ ಪೆಡೆದು ಸ್ಟಾರ್ ಆದ ನಟ.

ಯಾವುದೇ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ಇಲ್ಲದೇ ಬಣ್ಣದ ಲೋಕಕ್ಕೆ ಕಾಲಿಡುವ ಪ್ರತಿಭೆಗಳನ್ನು ಕೈಬಿಡದ ಕನ್ನಡ ಸಿನಿ ರಸಿಕರು ಯಶ್ ಅವರನ್ನೂ ಸಹ ಮೆಚ್ಚಿಕೊಂಡರು, ಅವರ ಚಿತ್ರಗಳನ್ನು ಒಪ್ಪಿಕೊಂಡರು. ನೋಡ ನೋಡುತ್ತಿದ್ದಂತೆ ಯಶ್ ಕನ್ನಡ ಚಿತ್ರರಂಗದಲ್ಲಿದ್ದ ಬೆರಳೆಣಿಕೆಯಷ್ಟು ಸ್ಟಾರ್ ಹೀರೊಗಳ ಪಟ್ಟಿ ಸೇರಿಬಿಟ್ಟರು.

ಹೀಗೆ ಕನ್ನಡ ಸಿನಿ ರಸಿಕರ ಪಾಲಿಗೆ ರಾಕಿಂಗ್ ಸ್ಟಾರ್ ಆದ ಯಶ್ ಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದರು. ಕೆಜಿಎಫ್ ಚಿತ್ರದ ಯಶಸ್ಸನ್ನು ಕೆಲವರು ಲಕ್ ಎಂದರೆ ಇನ್ನೂ ಕೆಲವರು ಶ್ರಮ ಎಂದು ಕೊಂಡಾಡಿದರು. ಕೆಜಿಎಫ್ ಮಾದರಿಯಲ್ಲಿಯೇ ಬಂದ ಇನ್ನುಳಿದ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ನೆಲಕಚ್ಚಿದ ಮೇಲೆ ಕೆಜಿಎಫ್ ಗೆದ್ದದ್ದು ಲಕ್‌ನಿಂದ ಎನ್ನುವುದು ಮೂರ್ಖತನವೇ ಸರಿ ಎನ್ನಬಹುದು.

ಇನ್ನು ಕೆಜಿಎಫ್ ಹಿಟ್ ಆದ ಬಳಿಕ ಯಶ್ ಯಾರೆಂದು ಎಲ್ಲರಿಗೂ ತಿಳಿಯಿತು, ಆ ಚಿತ್ರ ಬಾರದೇ ಇದ್ದಿದ್ದರೆ ಆತನ ಹೆಸರು ಬಹುತೇಕರಿಗೆ ತಿಳಿಯುತ್ತಿರಲಿಲ್ಲ ಎಂದು ಇತ್ತೀಚೆಗಷ್ಟೇ ತೆಲುಗು ನಟ ರವಿತೇಜ ಹೇಳಿಕೆಯೊಂದನ್ನು ನೀಡಿ ಯಶ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ರು. ಇದೀಗ ಈ ಸಾಲಿಗೆ ತೆಲುಗು ನಟ ಅಲ್ಲು ಅರ್ಜುನ್ ಅವರ ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಸಹ ಸೇರ್ಪಡೆಗೊಂಡಿದ್ದಾರೆ.

ಯುಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಚಿತ್ರಗಳ ಬಜೆಟ್ ನಟರಿಂದ ಹೆಚ್ಚಾಗುತ್ತಿಲ್ಲ, ಹೆಚ್ಚಿನ ಬಜೆಟ್ ಇರುವ ಚಿತ್ರಗಳಲ್ಲಿ ಸ್ಟಾರ್‌ಗಳು ನಟಿಸುತ್ತಿದ್ದಾರೆ ಅಷ್ಟೇ ಎಂದು ಹೇಳಿಕೆಯನ್ನು ನೀಡಿದ ಅಲ್ಲು ಅರವಿಂದ್ ಇದಕ್ಕೆ ಉದಾಹರಣೆಯಾಗಿ ಯಶ್ ಹಾಗೂ ಕೆಜಿಎಫ್ ಚಿತ್ರವನ್ನು ತೆಗೆದುಕೊಂಡಿದ್ದಾರೆ.

“ಕೆಜಿಎಫ್ ಬರುವ ಮುಂಚೆ ಆತ ಎಂತಹ ದೊಡ್ಡ ಸ್ಟಾರ್ ಹೇಳಿ, ಸಿನಿಮಾಗೆ ಹೆಚ್ಚು ಮೊತ್ತ ಹಾಕಿ ನಿರ್ಮಿಸಿದ ಕಾರಣ ಆತ ಸ್ಟಾರ್ ಆದ” ಎಂದು ಅಲ್ಲು ಅರವಿಂದ್ ಹೇಳಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಯಶ್ ಅಭಿಮಾನಿಗಳು ನಮ್ಮ ನಟ ಸ್ವಂತ ಪ್ರತಿಭೆಯಿಂದ ಬೆಳೆದವರು, ನಿಮ್ಮ ಮಕ್ಕಳ ಹಾಗೆ ನೆಪೋ ಕಿಡ್ ಅಲ್ಲ ಎಂದು ಅಲ್ಲು ಅರವಿಂದ್ ವಿರುದ್ಧ ಟ್ರೋಲ್ ಚಾಟಿ ಬೀಸಿದ್ದಾರೆ.

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago