ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು.
ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ ಹೋಟೆಲ್ನಲ್ಲಿ ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು.
ಈ ಪಾರ್ಟಿಯಲ್ಲಿ ಸುಮಲತಾ ಅಂಬರೀಶ್, ಅಭಿಷೇಕ್ ದಂಪತಿ, ಯಶ್ ದರ್ಶನ್ ಸೇರಿದಂತೆ ಸ್ಯಾಂಡಲ್ವುಡ್ ಅನೇಕ ಸಿನಿಮಾ ನಟರು ಈ ಭಾಗಿಯಾಗಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಆ ವೇಳೆ ‘ಅಂಬಿ ನಿಂಗೆ ವಯಸ್ಸಾಯ್ತೋʼ ಸಿನಿಮಾದ ಹೇ ಜಲೀಲಾ’ಬುಲ್ ಬುಲ್’ ಚಿತ್ರದ ‘ಜ್ಯೂನಿಯರ್ ಸೀನಿಯರ್, ಯಶ್ ನಟನೆಯ ಸಿನಿಮಾ ಹಾಡುಗಳಿಗೆ ಅಭಿವಾ ಪಾರ್ಟಿಯಲ್ಲಿ ಚಿತ್ರರಂಗದ ಕಲಾವಿದರು ಭಾಗಿಯಾಗಿದ್ದರು. ಅದರ ನಡುವೆ ಹಲವು ವರ್ಷಗಳ ನಂತರ ನಟಿ ಮಲಾಶ್ರೀ ನೃತ್ಯ ಎಲ್ಲರ ಗಮನ ಸೆಳೆದಿದೆ.
ಅಷ್ಟೇ ಅಲ್ಲದೇ ಈ ಸಂಗೀತ ಕಾರ್ಯಕ್ರಮದಲ್ಲಿ ಶಿವಣ್ಣ- ಪ್ರಭುದೇವಾ ಪ್ರಿಯಾಂಕ ಉಪೇಂದ್ರ,ರಾಗಿಣಿ ಪ್ರಜ್ವಲ್ ಸೇರಿದಂತೆ ಸುಮಲತಾ ಜೊತೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.ಅಭಿಷೇಕ್ ಅವಿವಾ ಪರಸ್ಪರ ಪ್ರೀತಿಗೆ ಬಾಲಿವುಡ್, ಟಾಲಿವುಡ್ , ಸ್ಯಾಂಡಲ್ವುಡ್ ನಟರ ನಟಿಯರು ಹಿರಿಯ ಗಣ್ಯರು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು ಎಲ್ಲೂರು ಬಂದು ಮದುವೆಗೆ ಶುಭ ಕೋರುವ ಮೂಲಕ ಸಾಕ್ಷಿಯಾದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…