ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು.
ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ ಹೋಟೆಲ್ನಲ್ಲಿ ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು.
ಈ ಪಾರ್ಟಿಯಲ್ಲಿ ಸುಮಲತಾ ಅಂಬರೀಶ್, ಅಭಿಷೇಕ್ ದಂಪತಿ, ಯಶ್ ದರ್ಶನ್ ಸೇರಿದಂತೆ ಸ್ಯಾಂಡಲ್ವುಡ್ ಅನೇಕ ಸಿನಿಮಾ ನಟರು ಈ ಭಾಗಿಯಾಗಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಆ ವೇಳೆ ‘ಅಂಬಿ ನಿಂಗೆ ವಯಸ್ಸಾಯ್ತೋʼ ಸಿನಿಮಾದ ಹೇ ಜಲೀಲಾ’ಬುಲ್ ಬುಲ್’ ಚಿತ್ರದ ‘ಜ್ಯೂನಿಯರ್ ಸೀನಿಯರ್, ಯಶ್ ನಟನೆಯ ಸಿನಿಮಾ ಹಾಡುಗಳಿಗೆ ಅಭಿವಾ ಪಾರ್ಟಿಯಲ್ಲಿ ಚಿತ್ರರಂಗದ ಕಲಾವಿದರು ಭಾಗಿಯಾಗಿದ್ದರು. ಅದರ ನಡುವೆ ಹಲವು ವರ್ಷಗಳ ನಂತರ ನಟಿ ಮಲಾಶ್ರೀ ನೃತ್ಯ ಎಲ್ಲರ ಗಮನ ಸೆಳೆದಿದೆ.
ಅಷ್ಟೇ ಅಲ್ಲದೇ ಈ ಸಂಗೀತ ಕಾರ್ಯಕ್ರಮದಲ್ಲಿ ಶಿವಣ್ಣ- ಪ್ರಭುದೇವಾ ಪ್ರಿಯಾಂಕ ಉಪೇಂದ್ರ,ರಾಗಿಣಿ ಪ್ರಜ್ವಲ್ ಸೇರಿದಂತೆ ಸುಮಲತಾ ಜೊತೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.ಅಭಿಷೇಕ್ ಅವಿವಾ ಪರಸ್ಪರ ಪ್ರೀತಿಗೆ ಬಾಲಿವುಡ್, ಟಾಲಿವುಡ್ , ಸ್ಯಾಂಡಲ್ವುಡ್ ನಟರ ನಟಿಯರು ಹಿರಿಯ ಗಣ್ಯರು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು ಎಲ್ಲೂರು ಬಂದು ಮದುವೆಗೆ ಶುಭ ಕೋರುವ ಮೂಲಕ ಸಾಕ್ಷಿಯಾದರು.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…