ಚಿತ್ರ ಮಂಜರಿ

ಹರಿಪ್ರಿಯಾ ವಸಿಷ್ಠ ಸಿಂಹ ನಿಶ್ಚಿತಾರ್ಥಕ್ಕೆ ವರ್ಷ : ಸಿಂಹಪ್ರಿಯಾ ಸಂಭ್ರಮ

ಸ್ಯಾಂಡಲ್ವುಡ್‌ ನ ಸ್ವೀಟ್‌ ಕಪಲ್‌ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ. ಈ ಖುಷಿಯ ವಿಚಾರವನ್ನು ನಟಿ ಹರಿಪ್ರಿಯ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದು, oh!! an year already since we got officiallly engaged. cheers to us for coping up with each other’s madness ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ 2 ರಂದು ಈ ಜೋಡಿ ಸದ್ದಿಲ್ಲದೇ ಕೇವಲ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ ಜನವರಿ 26 ರಂದು ಈ ಕ್ಯೂಟ್‌ ಕಪಲ್‌ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಬಹಳಾ ಸರಳವಾಗಿ ಹಾಗೂ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿತ್ತು.

ಈ ಸ್ಟಾರ್‌ ಕಪಲ್‌ ಗೆ ಸ್ಯಾಂಡಲ್ವುಡ್‌ ನ ನಟ ನಟಿಯರಾದ ಡಾಲಿ ಧನಂಜಯ್‌, ಅಮೃತಾ ಅಯ್ಯಂಗಾರ್‌, ಶಿವರಾಜ್‌ ಕುಮಾರ್‌ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಹ ಆಗಮಿಸಿ ಶುಭಕೋರಿದ್ದರು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ಕೂಡ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೂ ಕೂಡ ಈ ಜೋಡಿ ತಮ್ಮ ಪ್ರೀತಿಯ ವಿಚಾರವನ್ನೂ ಎಲ್ಲಿಯೂ ಕೂಡ ಬಿಟ್ಟುಕೊಟ್ಟಿರಲಿಲ್ಲ.

ತಮ್ಮ ಪ್ರೀತಿಗೆ ಹಿರಿಯರ ಸಮ್ಮತಿ ಸಿಕ್ಕ ನಂತರ ಈ ಜೋಡಿ ಗುಟ್ಟಾಗಿಯೇ ಮದುವೆ ತಯಾರಿಯಲ್ಲಿ ಬ್ಯೂಸಿಯಾಗಿತ್ತು.

ನಟಿ ಹರಿ ಪ್ರಿಯಾ ಅವರು ಮೂಗು ಚುಚ್ಚಿಸುವ ವೇಳೆ ಯಾರೋ ಅವರನ್ನು ಅಪ್ಪಿಕೊಂಡು ಸಂತೈಸುತ್ತಿದ್ದರು. ಅದು ವಸಿಷ್ಠ ಸಿಂಹ ಇರಬರುದು ಎಂದು ಅಭಿಮಾನಿಗಳು ಗೆಸ್‌ ಮಾಡಿದ್ದರು. ಇದಾದ ನಂತರ ಈ ಜೋಡಿ ದುಬೈ ಪ್ರವಾಸಕ್ಕೆ ಹಾರಿತ್ತು. ಈ ಮೂಲಕ ಇವರಿಬ್ಬರು ಸತಿಪತಿಗಳಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡಿತ್ತು.

lokesh

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

7 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

7 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

7 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

7 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

16 hours ago