ಚಿತ್ರ ಮಂಜರಿ

ಹರಿಪ್ರಿಯಾ ವಸಿಷ್ಠ ಸಿಂಹ ನಿಶ್ಚಿತಾರ್ಥಕ್ಕೆ ವರ್ಷ : ಸಿಂಹಪ್ರಿಯಾ ಸಂಭ್ರಮ

ಸ್ಯಾಂಡಲ್ವುಡ್‌ ನ ಸ್ವೀಟ್‌ ಕಪಲ್‌ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ. ಈ ಖುಷಿಯ ವಿಚಾರವನ್ನು ನಟಿ ಹರಿಪ್ರಿಯ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದು, oh!! an year already since we got officiallly engaged. cheers to us for coping up with each other’s madness ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ 2 ರಂದು ಈ ಜೋಡಿ ಸದ್ದಿಲ್ಲದೇ ಕೇವಲ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ ಜನವರಿ 26 ರಂದು ಈ ಕ್ಯೂಟ್‌ ಕಪಲ್‌ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಬಹಳಾ ಸರಳವಾಗಿ ಹಾಗೂ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿತ್ತು.

ಈ ಸ್ಟಾರ್‌ ಕಪಲ್‌ ಗೆ ಸ್ಯಾಂಡಲ್ವುಡ್‌ ನ ನಟ ನಟಿಯರಾದ ಡಾಲಿ ಧನಂಜಯ್‌, ಅಮೃತಾ ಅಯ್ಯಂಗಾರ್‌, ಶಿವರಾಜ್‌ ಕುಮಾರ್‌ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಹ ಆಗಮಿಸಿ ಶುಭಕೋರಿದ್ದರು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ಕೂಡ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೂ ಕೂಡ ಈ ಜೋಡಿ ತಮ್ಮ ಪ್ರೀತಿಯ ವಿಚಾರವನ್ನೂ ಎಲ್ಲಿಯೂ ಕೂಡ ಬಿಟ್ಟುಕೊಟ್ಟಿರಲಿಲ್ಲ.

ತಮ್ಮ ಪ್ರೀತಿಗೆ ಹಿರಿಯರ ಸಮ್ಮತಿ ಸಿಕ್ಕ ನಂತರ ಈ ಜೋಡಿ ಗುಟ್ಟಾಗಿಯೇ ಮದುವೆ ತಯಾರಿಯಲ್ಲಿ ಬ್ಯೂಸಿಯಾಗಿತ್ತು.

ನಟಿ ಹರಿ ಪ್ರಿಯಾ ಅವರು ಮೂಗು ಚುಚ್ಚಿಸುವ ವೇಳೆ ಯಾರೋ ಅವರನ್ನು ಅಪ್ಪಿಕೊಂಡು ಸಂತೈಸುತ್ತಿದ್ದರು. ಅದು ವಸಿಷ್ಠ ಸಿಂಹ ಇರಬರುದು ಎಂದು ಅಭಿಮಾನಿಗಳು ಗೆಸ್‌ ಮಾಡಿದ್ದರು. ಇದಾದ ನಂತರ ಈ ಜೋಡಿ ದುಬೈ ಪ್ರವಾಸಕ್ಕೆ ಹಾರಿತ್ತು. ಈ ಮೂಲಕ ಇವರಿಬ್ಬರು ಸತಿಪತಿಗಳಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡಿತ್ತು.

lokesh

Recent Posts

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

17 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

27 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago