ಚಿತ್ರ ಮಂಜರಿ

ಹರಿಪ್ರಿಯಾ ವಸಿಷ್ಠ ಸಿಂಹ ನಿಶ್ಚಿತಾರ್ಥಕ್ಕೆ ವರ್ಷ : ಸಿಂಹಪ್ರಿಯಾ ಸಂಭ್ರಮ

ಸ್ಯಾಂಡಲ್ವುಡ್‌ ನ ಸ್ವೀಟ್‌ ಕಪಲ್‌ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ. ಈ ಖುಷಿಯ ವಿಚಾರವನ್ನು ನಟಿ ಹರಿಪ್ರಿಯ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದು, oh!! an year already since we got officiallly engaged. cheers to us for coping up with each other’s madness ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ 2 ರಂದು ಈ ಜೋಡಿ ಸದ್ದಿಲ್ಲದೇ ಕೇವಲ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ ಜನವರಿ 26 ರಂದು ಈ ಕ್ಯೂಟ್‌ ಕಪಲ್‌ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಬಹಳಾ ಸರಳವಾಗಿ ಹಾಗೂ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿತ್ತು.

ಈ ಸ್ಟಾರ್‌ ಕಪಲ್‌ ಗೆ ಸ್ಯಾಂಡಲ್ವುಡ್‌ ನ ನಟ ನಟಿಯರಾದ ಡಾಲಿ ಧನಂಜಯ್‌, ಅಮೃತಾ ಅಯ್ಯಂಗಾರ್‌, ಶಿವರಾಜ್‌ ಕುಮಾರ್‌ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಹ ಆಗಮಿಸಿ ಶುಭಕೋರಿದ್ದರು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ಕೂಡ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೂ ಕೂಡ ಈ ಜೋಡಿ ತಮ್ಮ ಪ್ರೀತಿಯ ವಿಚಾರವನ್ನೂ ಎಲ್ಲಿಯೂ ಕೂಡ ಬಿಟ್ಟುಕೊಟ್ಟಿರಲಿಲ್ಲ.

ತಮ್ಮ ಪ್ರೀತಿಗೆ ಹಿರಿಯರ ಸಮ್ಮತಿ ಸಿಕ್ಕ ನಂತರ ಈ ಜೋಡಿ ಗುಟ್ಟಾಗಿಯೇ ಮದುವೆ ತಯಾರಿಯಲ್ಲಿ ಬ್ಯೂಸಿಯಾಗಿತ್ತು.

ನಟಿ ಹರಿ ಪ್ರಿಯಾ ಅವರು ಮೂಗು ಚುಚ್ಚಿಸುವ ವೇಳೆ ಯಾರೋ ಅವರನ್ನು ಅಪ್ಪಿಕೊಂಡು ಸಂತೈಸುತ್ತಿದ್ದರು. ಅದು ವಸಿಷ್ಠ ಸಿಂಹ ಇರಬರುದು ಎಂದು ಅಭಿಮಾನಿಗಳು ಗೆಸ್‌ ಮಾಡಿದ್ದರು. ಇದಾದ ನಂತರ ಈ ಜೋಡಿ ದುಬೈ ಪ್ರವಾಸಕ್ಕೆ ಹಾರಿತ್ತು. ಈ ಮೂಲಕ ಇವರಿಬ್ಬರು ಸತಿಪತಿಗಳಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡಿತ್ತು.

lokesh

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

5 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

5 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

6 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

6 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago