ಚಿತ್ರ ಮಂಜರಿ

ವಿದ್ಯಾಭ್ಯಾಸದ ಸಲುವಾಗಿ ಮಗನ್ನು ದೂರ ಇಟ್ಟಿದ್ವಿ : ವಿನೋದ್‌ ರಾಜ್

ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್‌ ರಾಜ್‌ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್‌ ರಾಜ್‌ ನನ್ನ ತಾಯಿ ನನ್ನನ್ನು ಹೇಗೆ ತಿದ್ದಿ ಪಾಠ ಹೇಳಿ ಬೆಳೆಸಿದ್ದರೋ ಅದೇ ರೀತಿ ನನ್ನ ಪತ್ನಿ ಕೂಡ ನನ್ನ ಮಗನನ್ನು ಬೆಳೆಸಿದ್ದಾರೆ. ಚೆನ್ನೈನಲ್ಲಿ ಇದ್ದರೂ ಕೂಡ ಕನ್ನಡ ಚೆನ್ನಾಗಿಯೇ ಮಾತನಾಡುತ್ತಾರೆ. ಇಲ್ಲಿದ್ದಾಗ ಮಗ ಹಾಗೂ ಪತ್ನಿಯ ಬಗ್ಗೆ ಏನೇನೋ ಮಾತು ಬರೋದು ಬೇಡ ಅಂತ ನನ್ನಮ್ಮ ಅವರನ್ನು ಮದ್ರಾಸ್‌ ನಲ್ಲಿ ಇರಿಸಿದ್ದರು. ಮಗನ ವಿದ್ಯಾಭ್ಯಾಸಕ್ಕಾಗಿ ಅವನನ್ನು ನಮ್ಮಿಂದ ದೂರ ಇಟ್ಟಿದ್ದೆವು. ಅದರಂತೆ ಈಗ ನನ್ನ ಮಗ ಚೆನ್ನಾಗಿ ಓದಿ ಕೆಲಸದಲ್ಲಿ ಇದ್ದಾರೆ. ತಿಂಗಳಿಗೆ 50 ಸಾವಿರ ಸಂಬಳ ಬರುತ್ತದೆ ಎಂದಿದ್ದಾರೆ.

ತಮ್ಮ ತಾಯಿ ಲೀಲಾವತಿ ಅವರ ಬಗ್ಗೆ ಮಾತನಾಡಿರುವ ನಟ ವಿನೋದ್‌ ರಾಜ್‌ ತಮ್ಮ ತಾಯಿಯ ಕೊನೆಯ ಆಸೆ ಏನಾಗಿತ್ತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ನನ್ನ ತಾಯಿಗೆ ದೇವಸ್ಥಾನಗಳಿಗೆ ಭೇಟಿ ನೀಡುವ ಆಸೆ ಇತ್ತು. ಎಂದಿದ್ದಾರೆ.

ಅಮ್ಮನಿಗೋಸ್ಕರ ಗುಡಿ ಕಟ್ಟಲೇ ಬೇಕು. ಇದರ ಬಗ್ಗೆ ಯೋಚಿಸಿ ಮಾಡುತ್ತೇವೆ ಅಮ್ಮನ ಸ್ಮಾರಕ ಮಾಡುವ ಚಿಂತನೆ ಇದೆ ಎಂದಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿಯವರು ಮೊನ್ನೆ ಇಹಲೋಕ ತ್ಯಜಿಸಿದ್ದರು. ನಟಿ ಲೀಲಾವತಿಯವರನ್ನು ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ಹೊರವಲಯದ ನೆಲಮಂಗಲದ ಸೋಲದೆವನಹಳ್ಳಿಯಲ್ಲಿರುವ ಅವರ ನೆಚ್ಚಿನ ತೋಟದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಚಿತ್ರರಂಗದ ಹಲವು ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಮೇರು ಕಲಾವಿದೆ ಲೀಲಾವತಿಯವರ ಅಂತಿಮ ದರ್ಶನ ಪಡೆದರು.

lokesh

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago