ಚಿತ್ರ ಮಂಜರಿ

ವಿದ್ಯಾಭ್ಯಾಸದ ಸಲುವಾಗಿ ಮಗನ್ನು ದೂರ ಇಟ್ಟಿದ್ವಿ : ವಿನೋದ್‌ ರಾಜ್

ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್‌ ರಾಜ್‌ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್‌ ರಾಜ್‌ ನನ್ನ ತಾಯಿ ನನ್ನನ್ನು ಹೇಗೆ ತಿದ್ದಿ ಪಾಠ ಹೇಳಿ ಬೆಳೆಸಿದ್ದರೋ ಅದೇ ರೀತಿ ನನ್ನ ಪತ್ನಿ ಕೂಡ ನನ್ನ ಮಗನನ್ನು ಬೆಳೆಸಿದ್ದಾರೆ. ಚೆನ್ನೈನಲ್ಲಿ ಇದ್ದರೂ ಕೂಡ ಕನ್ನಡ ಚೆನ್ನಾಗಿಯೇ ಮಾತನಾಡುತ್ತಾರೆ. ಇಲ್ಲಿದ್ದಾಗ ಮಗ ಹಾಗೂ ಪತ್ನಿಯ ಬಗ್ಗೆ ಏನೇನೋ ಮಾತು ಬರೋದು ಬೇಡ ಅಂತ ನನ್ನಮ್ಮ ಅವರನ್ನು ಮದ್ರಾಸ್‌ ನಲ್ಲಿ ಇರಿಸಿದ್ದರು. ಮಗನ ವಿದ್ಯಾಭ್ಯಾಸಕ್ಕಾಗಿ ಅವನನ್ನು ನಮ್ಮಿಂದ ದೂರ ಇಟ್ಟಿದ್ದೆವು. ಅದರಂತೆ ಈಗ ನನ್ನ ಮಗ ಚೆನ್ನಾಗಿ ಓದಿ ಕೆಲಸದಲ್ಲಿ ಇದ್ದಾರೆ. ತಿಂಗಳಿಗೆ 50 ಸಾವಿರ ಸಂಬಳ ಬರುತ್ತದೆ ಎಂದಿದ್ದಾರೆ.

ತಮ್ಮ ತಾಯಿ ಲೀಲಾವತಿ ಅವರ ಬಗ್ಗೆ ಮಾತನಾಡಿರುವ ನಟ ವಿನೋದ್‌ ರಾಜ್‌ ತಮ್ಮ ತಾಯಿಯ ಕೊನೆಯ ಆಸೆ ಏನಾಗಿತ್ತು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ನನ್ನ ತಾಯಿಗೆ ದೇವಸ್ಥಾನಗಳಿಗೆ ಭೇಟಿ ನೀಡುವ ಆಸೆ ಇತ್ತು. ಎಂದಿದ್ದಾರೆ.

ಅಮ್ಮನಿಗೋಸ್ಕರ ಗುಡಿ ಕಟ್ಟಲೇ ಬೇಕು. ಇದರ ಬಗ್ಗೆ ಯೋಚಿಸಿ ಮಾಡುತ್ತೇವೆ ಅಮ್ಮನ ಸ್ಮಾರಕ ಮಾಡುವ ಚಿಂತನೆ ಇದೆ ಎಂದಿದ್ದಾರೆ.

ವಯೋ ಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿಯವರು ಮೊನ್ನೆ ಇಹಲೋಕ ತ್ಯಜಿಸಿದ್ದರು. ನಟಿ ಲೀಲಾವತಿಯವರನ್ನು ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ಹೊರವಲಯದ ನೆಲಮಂಗಲದ ಸೋಲದೆವನಹಳ್ಳಿಯಲ್ಲಿರುವ ಅವರ ನೆಚ್ಚಿನ ತೋಟದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಚಿತ್ರರಂಗದ ಹಲವು ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಮೇರು ಕಲಾವಿದೆ ಲೀಲಾವತಿಯವರ ಅಂತಿಮ ದರ್ಶನ ಪಡೆದರು.

lokesh

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

24 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago