ಆಂದೋಲನ ಪುರವಣಿ

ಸಿನಿಮಾಲ್‌ : ʼ13ʼಕ್ಕೆ ಮೂರಲ್ಲ ಆರು ತಿಂಗಳಾಯಿತು

ಅಂತರ್ಮತೀಯ ಪ್ರೆಮಕಥೆಯನ್ನು ಹೇಳುವ ಚಿತ್ರವನ್ನು ಕೆ.ನರೇಂದ್ರಬಾಬು ನಿರ್ದೇಶಿಸಿದ್ದಾರೆ. ಅದರ ಹೆಸರು ‘13’. ಚಿತ್ರ ಮತ್ತು ಅದರ ಚಿತ್ರೀಕರಣದ ಕುರಿತಂತೆ ಅವರು ಹೇಳುವುದು ಹೀಗೆ: ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ ಪಡುತ್ತಾರೆ ಎಂಬುದನ್ನು ಹೇಳುವ, ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು. ಮುಹೂರ್ತದ ಸಂದರ್ಭದಲ್ಲಿ ಮೂರು ತಿಂಗಳಲ್ಲಿ ಮೊದಲ ಪ್ರತಿ ಹೊರತರುತ್ತೇನೆ ಎಂದು ಹೇಳಿದ್ದೆ, ಆದರೆ ಸಾಕಷ್ಟು ಅಡೆತಡೆಗಳುಂಟಾಗಿ ಆರು ತಿಂಗಳಾಯಿತು.

ಒಬ್ಬರಿಗೆ ಹಾರ್ಟ್‌ಅಟ್ಯಾಕ್ ಆಯ್ತೂ, ನನ್ನ ಕಾಲಿಗೂ ಪೆಟ್ಟಾಗಿ ಇನ್ನೂ ಸರಿಯಾಗಿಲ್ಲ, ಕೊಟ್ಟಿಗೆ ಹಾರದಲ್ಲಿ ಮಾಡಬೇಕೆಂದಿದ್ದ ಸೀನನ್ನು ಮಂಡ್ಯ ಹತ್ತಿರದ ಹಳ್ಳಿಯೊಂದರಲ್ಲಿ ಮಾಡಿದ್ದೇನೆ. ನನ್ನ ತಂಡ ಜೊತೆ ನಿಂತಿದ್ದರಿಂದ ಇಲ್ಲಿಯವರೆಗೆ ಬಂದಿದ್ದೇನೆ. ನಾಲ್ವರು ನಿರ್ಮಾಪಕರು ನಾಲ್ಕು ಕಂಬಗಳಂತೆ ನಿಂತಿದ್ದಾರೆ. ರಾಗಣ್ಣ ಅವರನ್ನು ಈ ವರೆಗೆ ನೋಡಿದ್ದಕ್ಕಿಂತ ಬೇರೆಯದೇ ರೀತಿ ನೋಡಬಹುದು. ರಾಘವೇಂದ್ರ ರಾಜ್‌ಕುಮಾರ್, ಶ್ರುತಿ ಜೋಡಿಯ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರು ಪ್ರಮುಖ ಪಾತ್ರಧಾರಿ. ಯುವಿ ಪ್ರೊಡಕ್ಷನ್ ಲಾಂಛನದಲ್ಲಿ ಈ ಚಿತ್ರವನ್ನು ಸಂಪತ್‌ಕುಮಾರ್, ಮಂಜುನಾಥ್, ಮಂಜುನಾಥಗೌಡ ಸೇರಿ ನಿರ್ಮಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡದೆ ಒಂದು ನೈಜ ಘಟನೆ ಈ ಚಿತ್ರಕ್ಕೆ ಸ್ಛೂರ್ತಿ ಎನ್ನಲಾಗಿದೆ. ಮಂಜುನಾಥ್ ನಾಯ್ಡು ಛಾಯಾಗ್ರಹಣ ಹಾಗೂ ಸೋಹನ್ ಬಾಬು ಅವರ ಸಂಗೀತ ಈ ಚಿತ್ರಕ್ಕಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago